ಮಂಡ್ಯ

ಅನಧಿಕೃತವಾಗಿ ಟ್ಯೂಶನ್ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ ಎಚ್ಚರಿಕೆ

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಮುಚ್ಚಲು ಆದೇಶ ನೀಡಿದೆ.

ಮಂಡ್ಯ ಡಿಡಿಪಿಐ ಜವರೇಗೌಡರು ಈ ಬಗ್ಗೆ ಎಲ್ಲಾ ತಾಲ್ಲೂಕು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಬಂದ್ ಮಾಡಬೇಕು, ಸರಕಾರಿ, ಅನುದಾನ, ಅನುದಾನ ರಹಿತ ಶಿಕ್ಷಕರು ಅನುಮತಿಯಿಲ್ಲದೇ ಟ್ಯೂಶನ್ ಮಾಡುತ್ತಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಅನುಮತಿ ಪಡೆಯದೇ ಟ್ಯೂಶನ್ ನಡೆಸುತ್ತಿದ್ದರೆ ಅಂತಹ ಸೆಂಟರ್‌ಗಳನ್ನು ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ. ಇನ್ನು ಬಿ ಇ ಒ ನೀಡಿದ ವರದಿ ಆಧರಿಸಿ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಟ್ಯೂಶನ್ ಸೆಂಟರ್‌ ಅನ್ನು ರದ್ದು ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಟ್ಯೂಶನ್ ಸೆಂಟರ್‌ಗಳನ್ನು ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಅಧಿಕೃತ ಟ್ಯೂಶನ್ ಮಾಡಬೇಕೆಂದರೆ, ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾಯ್ದೆಯ ಪ್ರಕಾರ 5 ಸಾವಿರ ಠೇವಣಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. 1 ಲಕ್ಷ ಭದ್ರತಾ ಠೇವಣಿಯನ್ನು ಇಟ್ಟಿರಬೇಕು. ಇದರ ಜೊತೆಗೆ ಟ್ಯೂಶನ್‌ ಮಾಡುವ ಸ್ಥಳದಲ್ಲಿ ಎಲ್ಲಾ ಮೂಲಭೂತ ಸೌಲಭ್ಯ, ಸಿಸಿ ಟಿವಿ ಕ್ಯಾಮೆರಾ, ಗಾಳಿ-ಬೆಳಕು ಇರುವ ಕಟ್ಟಡ, ಅರ್ಹ ಶಿಕ್ಷಕರ ಹಾಗೂ ಅವರು ಪಾಠ ಮಾಡುವ  ಸಂಪೂರ್ಣ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿ ಅನುಮತಿ ಮಾಡಬೇಕೆಂದು ಡಿ ಡಿ ಪಿ ಐ ಮಾಹಿತಿ ನೀಡಿದರು.

andolana

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

18 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

18 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

18 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 hours ago