ಮಂಡ್ಯ

ಸಮ್ಮೇಳನ ಪ್ರಚಾರಕ್ಕೆ ಮೊಬೈಲ್ ಆಪ್ ಬಳಕೆ: ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಮುಂಬರುವ ಡಿಸೆಂಬರ್ ೨೦,೨೧ ಮತ್ತು ೨೨ ರಂದು ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಉದ್ದೇಶಕ್ಕೆ ಮತ್ತು ಹೆಸರು ನೋಂದಾಯಿಸಲು ಮೊಬೈಲ್ ಆಪ್ ಒಂದನ್ನು ರೂಪಿಸಲಾಗುವುದು ಎಂದು ಪ್ರಚಾರ ಸಮಿತಿ ಅಧ್ಯಕ್ಷ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ್ರಚಾರ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಕಸಾಪ ಮತ್ತು ಸಮ್ಮೇಳನ ನೋಂದಣಿ ಸಮಿತಿಯೊಂದಿಗೆ ಚರ್ಚಿಸಿ ಸಮ್ಮೇಳನಕ್ಕೆ ಸದಸ್ಯರು ನೋಂದಾಯಿಸಲು ಮತ್ತು ಪ್ರಚಾರದ ಉದ್ದೇಶಕ್ಕಾಗಿ ಮೊಬೈಲ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಲಾಗುವುದು. ಇದರ ಜೊತೆಗೆ ಪ್ರಚಾರ ಸಮಿತಿ ಜೊತೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಪ್ರಮುಖ ಐದು ಉಪಸಮಿತಿಗಳನ್ನು ರಚಿಸಲಾಗುವುದು ಎಂದರು.

ಮುದ್ರಣ ಮಾಧ್ಯಮ ಪ್ರಚಾರ ಉಪಸಮಿತಿ, ಸಾಮಾಜಿಕ ಜಾಲತಾಣಗಳ ಮಾಧ್ಯಮ ಪ್ರಚಾರ ಉಪಸಮಿತಿ, ವಿದ್ಯುನ್ಮಾನ ಮಾಧ್ಯಮ ಪ್ರಚಾರ ಉಪಸಮಿತಿ, ಗ್ರಾಫಿಕ್ ವಿನ್ಯಾಸ ಮಾಧ್ಯಮ ಪ್ರಚಾರ ಉಪ ಸಮಿತಿ ಹಾಗೂ ಇತರೆ ತಂತ್ರಜ್ಞಾನಗಳ ಮಾಧ್ಯಮ ಪ್ರಚಾರ ಉಪಸಮಿತಿಗಳನ್ನು ರಚಿಸಲಾಗುವುದು. ಪ್ರಚಾರ ಸಮಿತಿಯಲ್ಲಿರುವ ಐದು ಸದಸ್ಯರನ್ನು ಪ್ರತಿ ಉಪಸಮಿತಿಗೆ ನೇಮಕ ಮಾಡಲಾಗುವುದು. ಆಯಾ ಕಾರ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರು ಕಾರ್ಯೋನ್ಮುಖ ರಾಗುತ್ತಾರೆ ಎಂದು ತಿಳಿಸಿದರು.

ಪ್ರಚಾರ ಕಾರ್ಯ ರೂಪಿಸುವ ಕಂಪನಿಗಳನ್ನು ಪಾರದರ್ಶಕವಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ಆಯ್ಕೆ ಮಾಡಲಾಗುವುದು ಎಂದರು.

ನಿಯಮಿತವಾಗಿ ಗೂಗಲ್ ಮೀಟ್ ಮೂಲಕ ಸಭೆಗಳನ್ನು ನಡೆಸುವುದರ ಜೊತೆಗೆ ಸಮ್ಮೇಳನ ಮುಗಿಯುವವರೆಗೆ ಪ್ರತಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗಳನ್ನು ಆಯೋಜಿಸಿ ಪ್ರಗತಿ ಪರಿಶೀಲಿಸಲಾಗುವುದು ಎಂದರು.

ಪ್ರಚಾರ ಚುರುಕುಗೊಳಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ, ಜಾಥಾ ಪ್ರಭಾತಭೇರಿ ಕಾರ್ಯಕ್ರಮಗಳನ್ನು ಬಿಇಒಗಳ ನೇತೃತ್ವದಲ್ಲಿ ನಡೆಸಲಾಗುವುದು ಎಂದರು.

ಸಮಿತಿಯ ಸದಸ್ಯ ಪತ್ರಕರ್ತ ಡಿ.ಎನ್. ಶ್ರೀಪಾದು ಮಾತನಾಡಿ ರಾಷ್ಟ್ರಮಟ್ಟದಲ್ಲಿ ಪದ್ಮ ಪುರಸ್ಕೃತರಾದ ಸಾಹಿತಿ ಪು.ತಿ.ನರಸಿಂಹಾಚಾರ್,ವಿಜ್ಞಾನಿ ಡಾ.ರಾಜಾರಾಮಣ್ಣ, ಡಾ. ಮೇಲುಕೋಟೆ,ನಿಘಂಟು ತಜ್ಞ ಜಿ.ವೆಂಕಟಸುಬ್ಬಯ್ಯ, ಶ್ರೀನಿವಾಸನ್ ಮುಂತಾದವರ ಪರಿಚಯ ಹಾಗೂ ಚಿತ್ರಗಳನ್ನು ಪ್ರಚಾರದಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.ವಿದ್ಯಾರ್ಥಿಗಳು ಜಿಲ್ಲೆಯ ಮಾಹಿತಿ ತಿಳಿಯಲು ಹಾಗೂ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸಲು ರಸಪ್ರಶ್ನೆ ಸ್ಪರ್ಧೆ ನಡೆಸಬೇಕು ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ ರಾಜ್ಯ ಮಟ್ಟದಲ್ಲಿ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮ್ಮೇಳನದ ಸಮಿತಿಯಲ್ಲಿ ಸ್ಥಾನ ಕಲ್ಪಿಸಿ ಅವರ ಮಾರ್ಗದರ್ಶನ ಪಡೆಯಬೇಕೆಂದರು.ಎಲ್ಲಾ ಸಮಿತಿಗಳಲ್ಲೂ ಒಂದಿಬ್ಬರು ಪತ್ರಕರ್ತರು ಇರಲಿ ಎಂದರು

ಸಭೆಯಲ್ಲಿ ಎಫ್‌ಎಂ ರೇಡಿಯೋ ಮೂಲಕ, ಚಿತ್ರಮಂದಿರಗಳಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನದ ಮೂಲಕ ಪ್ರಚಾರ ಕೈಗೊಳ್ಳಬಹುದು ಎಂದು ಸದಸ್ಯರು ಸೂಚಿಸಿದರು.

ಸಭೆಯಲ್ಲಿ ಸಮ್ಮೇಳನ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ, ಸಮಿತಿ ಸದಸ್ಯ ಕಾರ್ಯದರ್ಶಿ ರಾಘವೇಂದ್ರ, ಸಂಚಾಲಕರಾದ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರಾದ ಎಸ್.ಹೆಚ್.ನಿರ್ಮಲ ಕಸಾಪ ಕಾರ್ಯದರ್ಶಿಗಳಾದ ಡಾ.ಹುಸ್ಕೂರು ಕೃಷ್ಣೇಗೌಡ, ಹರ್ಷ ವಿ ಪಣ್ಣೆದೊಡ್ಡಿ, ಬಿ.ಎಂ.ಅಪ್ಪಾಜಪ್ಪ, ಧನಂಜಯ,ಚಂದ್ರಲಿಂಗು, ಕೆ.ಶಂಭು ಕಬ್ಬನಹಳ್ಳಿ, ಮುಂತಾದವರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago