n cheluvarayaswamy
ಮಂಡ್ಯ: ಬದಲಾವಣೆ ಪ್ರಕೃತಿಯ ನಿಯಮ. ಕೃಷಿ ಪದ್ಧತಿ ಎಂದರೆ ಕಷ್ಟವಾದ ಕೆಲಸ, ಸಾಲ ಮಾಡಬೇಕು, ನಷ್ಟ ಅನುಭವಿಸಬೇಕು ಎಂಬ ಮನೋಭಾವವನ್ನು ತೊರೆಯಬೇಕು. ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬಹುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಅವರು ಇಂದು ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ, ಮಂಡ್ಯ ಇಲ್ಲಿ ಕಬ್ಬು, ಭತ್ತ, ರಾಗಿ ಬೆಳೆಗಳ ಬಗ್ಗೆ ವಿಶೇಷ ತಾಂತ್ರಿಕ ಸಂವಾದ (ಬಿತ್ತನೆಯಿಂದ ಮಾರಾಟದವರೆಗೆ)ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿ ಪದ್ದತಿಯಲ್ಲಿ ಹೆಚ್ಚು ಇಳುವರಿ ಹಾಗೂ ಆರ್ಥಿಕವಾಗಿ ಸದೃಢರಾಗಲು ಅನೇಕ ಹೊಸ ಪದ್ಧತಿಗಳನ್ನು ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಮಹಾವಿದ್ಯಾಲಯಗಳು ಪರಿಚಯಿಸುತ್ತಿದೆ. ರೈತರು ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದರು.
ಒಂದೇ ರೀತಿಯ ಬೆಳೆಯನ್ನು ಹಲವು ವರ್ಷಗಳು ನಿರಂತರವಾಗಿ ಬೆಳೆದರೆ ಮಣ್ಣು ಪೌಷ್ಟಿಕಾಂಶ ಕಳೆದುಕೊಳ್ಳುವುದರೆ ಜೊತೆಗೆ ಇಳುವರಿ ಸಹ ಕಡಿಮೆಯಾಗುತ್ತದೆ. ಮೂರು ಎಕರೆ ಜಮೀನನ್ನು ಮೂರು ಭಾಗ ಮಾಡಿ ಒಂದೊಂದು ಎಕರೆಯಲ್ಲಿ ಒಂದೊಂದು ಬೆಳೆಯನ್ನು ಬೆಳೆಯಿರಿ. ಮುಂದಿನ ವರ್ಷ ಮೂರು ವಿಭಾಗದಲ್ಲಿ ಬೆಳೆದ ಬೆಳೆಯನ್ನು ಅದಲು ಬದಲು ಮಾಡಿಕೊಳ್ಳಿ ಎಂದರು.
ರೈತರು ಹೊಸ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಲವಾರು ಕಾರಣಗಳಿಂದ ಹಿಂಜರಿಯಬಹುದು. ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆಯಿರಿ, ಲಾಭದಾಯಕ ಎಂದು ಮನದಟ್ಟು ಆದ ನಂತರ ಸಂಪೂರ್ಣವಾಗಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…