n cheluvarayaswamy
ಮಂಡ್ಯ: ಬದಲಾವಣೆ ಪ್ರಕೃತಿಯ ನಿಯಮ. ಕೃಷಿ ಪದ್ಧತಿ ಎಂದರೆ ಕಷ್ಟವಾದ ಕೆಲಸ, ಸಾಲ ಮಾಡಬೇಕು, ನಷ್ಟ ಅನುಭವಿಸಬೇಕು ಎಂಬ ಮನೋಭಾವವನ್ನು ತೊರೆಯಬೇಕು. ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬಹುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಅವರು ಇಂದು ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ, ಮಂಡ್ಯ ಇಲ್ಲಿ ಕಬ್ಬು, ಭತ್ತ, ರಾಗಿ ಬೆಳೆಗಳ ಬಗ್ಗೆ ವಿಶೇಷ ತಾಂತ್ರಿಕ ಸಂವಾದ (ಬಿತ್ತನೆಯಿಂದ ಮಾರಾಟದವರೆಗೆ)ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿ ಪದ್ದತಿಯಲ್ಲಿ ಹೆಚ್ಚು ಇಳುವರಿ ಹಾಗೂ ಆರ್ಥಿಕವಾಗಿ ಸದೃಢರಾಗಲು ಅನೇಕ ಹೊಸ ಪದ್ಧತಿಗಳನ್ನು ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಮಹಾವಿದ್ಯಾಲಯಗಳು ಪರಿಚಯಿಸುತ್ತಿದೆ. ರೈತರು ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದರು.
ಒಂದೇ ರೀತಿಯ ಬೆಳೆಯನ್ನು ಹಲವು ವರ್ಷಗಳು ನಿರಂತರವಾಗಿ ಬೆಳೆದರೆ ಮಣ್ಣು ಪೌಷ್ಟಿಕಾಂಶ ಕಳೆದುಕೊಳ್ಳುವುದರೆ ಜೊತೆಗೆ ಇಳುವರಿ ಸಹ ಕಡಿಮೆಯಾಗುತ್ತದೆ. ಮೂರು ಎಕರೆ ಜಮೀನನ್ನು ಮೂರು ಭಾಗ ಮಾಡಿ ಒಂದೊಂದು ಎಕರೆಯಲ್ಲಿ ಒಂದೊಂದು ಬೆಳೆಯನ್ನು ಬೆಳೆಯಿರಿ. ಮುಂದಿನ ವರ್ಷ ಮೂರು ವಿಭಾಗದಲ್ಲಿ ಬೆಳೆದ ಬೆಳೆಯನ್ನು ಅದಲು ಬದಲು ಮಾಡಿಕೊಳ್ಳಿ ಎಂದರು.
ರೈತರು ಹೊಸ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಲವಾರು ಕಾರಣಗಳಿಂದ ಹಿಂಜರಿಯಬಹುದು. ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆಯಿರಿ, ಲಾಭದಾಯಕ ಎಂದು ಮನದಟ್ಟು ಆದ ನಂತರ ಸಂಪೂರ್ಣವಾಗಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…