ಮಂಡ್ಯ

ಮಾ.23ರಿಂದ ಏ.5 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ -2026ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಲ್ಲಿ ಉತ್ಸವ ನಡೆಯುತ್ತಿದೆ. ಆ ವೇಳೆ ಬೇಸಿಗೆ ಇರುವುದರಿಂದ ಬ್ರಹ್ಮೋತ್ಸವದ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ. ಹಾಲಿ ಇರುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಿ ಎಂದು ಸೂಚನೆ ನೀಡಿದರು.

ವೈರಮುಡಿ ಬ್ರಹ್ಮೋತ್ಸವ ನಡೆಯುವ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಈಗಾಗಲೇ ಜನ‌ಸಂದಣಿ ಹೊಂದುವ ಕಡೆ ಸಿ.ಸಿ.ಟಿ.ವಿ ವ್ಯವಸ್ಥೆ ಇದೆ. ಅಗತ್ಯ ಇರುವ ಕಡೆ ಹೆಚ್ಚುವರಿ ಸಿ.ಸಿ ಟಿ ವಿ ಅಳವಡಿಸಿ. ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ. ಕೊಳದ ಬಳಿ ನೂರಿತ ಈಜು ಪಡೆ, ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜಿಸಿ ಎಂದು ನಿರ್ದೇಶನ ನೀಡಿದರು.

ಕ್ಷೇತ್ರದಲ್ಲಿ ಡ್ರೈನೇಜ್ ವ್ಯವಸ್ಥೆ ಕಲ್ಪಿಸಿ ಸ್ವಚ್ಚತೆ ಕಾಪಾಡಿ, ಆಂಬುಲೆನ್ಸ್, ಮೆಡಿಸಿನ್ ಗಳ ವ್ಯವಸ್ಥೆಯನ್ನು ಕಲ್ಪಿಸಿ. ಎಲ್ಲಾ ವಿದಧ ವೈದ್ಯರುಗಳು ಕಡ್ಡಾಯವಾಗಿ ನಿಗದಿ ಪಡಿಸಿದ ಸ್ಥಳದಲ್ಲಿ ಇರಬೇಕು. ಭಕ್ತಾದಿಗಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಮೇಲುಕೋಟೆ ಕಲ್ಯಾಣ, ಬಸ್ ನಿಲ್ದಾಣ, ದೇವಾಲಯದ ಬಳಿ ಬಯೋ ಶೌಚಾಲಯಗಳನ್ನು ನಿರ್ಮಿಸಬೇಕು. ರಸ್ತೆಗಳ ದುರಸ್ತಿ ಮಾಡಿಸಿ. ವಿವಿಧ ತಾಲೂಕಿನಿಂದ ಬರುವ ಸಾರ್ವಜನಿಕರಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ. ಪಾರ್ಕಿಂಗ್ ನಿಂದ ದೇವಾಲಯಕ್ಕೆ ಭಕ್ತಾದಿಗಳು ಸಂಚಾರಿಸಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಮಂಗಳ ವಾದ್ಯ, ನಾದ ಸ್ವರ ಹಾಗೂ ವಿವಿಧ ಕಲಾ ತಂಡಗಳನ್ನು ವೈರಮುಡಿ ಬ್ರಹ್ಮೋತ್ಸವದಲ್ಲಿ ನಿಯೋಜಿಸಿ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವೈರಮುಡಿ ಬ್ರಹ್ಮೋತ್ಸವ ಪ್ರಾರಂಭವಾಗಿ ಮುಗಿಯುವವರೆಗೂ ನಿರಂತರ ವಿದ್ಯುತ್ ಪೂರೈಕೆ ಮಾಡಿ. ಬೀದಿ ದೀಪಗಳ ದುರಸ್ತಿಗೊಳಿಸಿ ಎಂದು ಹೇಳಿದರು.

ಚೆಲುವನಾರಾಯಣ ಸ್ವಾಮಿ ದೇವಾಲಯ ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯ ಹಾಗೂ ದೇವಾಲಯದ ವ್ಯಾಪ್ತಿಯ ಪ್ರಮುಖ ಮಂಟಪ ಹಾಗೂ ಕಲ್ಯಾಣಿಯಲ್ಲಿ ವಿಶೇಷ ದಿಪಾಲಂಕಾರ ಹಾಗೂ ಹೂವಿನ ಅಲಂಕಾರ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ, ವೈರಮುಡಿ ಬ್ರಹ್ಮೋತ್ಸವ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಅತಿ ಮುಖ್ಯ. ಸದರಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವೈರುಮುಡಿ ಬ್ರಹ್ಮೋತ್ಸವಕ್ಕೆ ಭೇಟಿ ನೀಡುವ ಗಣ್ಯರು ಮತ್ತು ಅತಿ ಗಣ್ಯರಿಗೆ ಸೂಕ್ತ ಶಿಷ್ಟಾಚಾರ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಟಿ.ಎನ್ ನರಸಿಂಹಮೂರ್ತಿ, ಮುಜರಾಯಿ ತಹಶೀಲ್ದಾರ್ ತಮ್ಮೆಗೌಡ, ಪಾಂಡವಪುರ ಇ ಓ ವೀಣಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago