ಮಂಡ್ಯ

ವೈರಮುಡಿ ಬ್ರಹ್ಮೋತ್ಸವದ  ಪುರಾತನ ಆಭರಣಗಳ ಹಸ್ತಾಂತರ

ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು.
ಪಾಂಡವಪುರ ತಾಲ್ಲೂಕು ಖಜಾನೆಯಲ್ಲಿದ್ದ ತಿರುವಾಭರಣಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆಮಾಡಲಾಯಿತು. ಬಂಗಾರ, ಮುತ್ತು ಹಾಗೂ ವಜ್ರಖಚಿತ ಆಭರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಚೆಲುವನಾರಾಯಣಸ್ವಾಮಿಯ ಅಲಂಕಾರಕ್ಕಾಗಿ ನೀಡಲಾಯಿತು.

ಶಂಖ, ಚಕ್ರ, ಗದಾಂಗಿ ಕಿರೀಟ ಬಂಗಾರದ ಬಟ್ಟಲು ಮುತ್ತುಮುಡಿ, ಮುತ್ತಿನ ಸರಗಳು ಕೋರಂಬ ಹೀಗೆ 56 ವೈವಿಧ್ಯಮಯ ಆಭರಣಗಳನ್ನು ಒಂದೊಂದಾಗಿ ಪರಿಶೀಲಿಸಿ ದಾಖಲಿಸಿದ ನಂತರ ದೇವಾಲಯದ ಕೈಂಕರ್ಯಪರಿಗೆ ಹಸ್ತಾಂತರ ಮಾಡಲಾಯಿತು.

ಈ ವೇಳೆ ಸ್ಥಾನೀಕರಾದ ಕರಗಂ ನಾರಾಯಣ ಅಯ್ಯಂಗಾರ್, ಸ್ಥಾನೀಕಂ ಶ್ರೀನಿವಾಸನರಸಿಂಹನ್ ಗುರೂಜಿ, ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್, ಸ್ಥಾನೀಕಂ ಸಂಪತ್ಕುಮಾರನ್, ಸ್ಥಾನೀಕಂ ಶ್ರೀರಾಮನ್, ಪರಿಚಾರಕ ಪಾರ್ಥಸಾರಥಿ, ಅರ್ಚಕ ವರದರಾಜಭಟ್, ಪರಕಾಲಮಠದ ಪ್ರತಿನಿಧಿ ನರಸಿಂಹರಂಗನ್, ಅಕೌಂಟೆಂಟ್ ಹೇಮಂತಕುಮಾರ್, ಪ್ರಥಮದರ್ಜೆ ಸಹಾಯಕ ಪ್ರಕಾಶ್ ಪಾರ್ಕಾವಣೆಯಲ್ಲಿ ಭಾಗವಹಿಸಿದ್ದರು.

ಈ ಅಮೂಲ್ಯ ಪುರಾತನ ಆಭರಣಗಳು ಯುಗಾದಿ ಹಬ್ಬದಿಂದಲೇ ಚೆಲುವನಾರಾಯಣನನ್ನು ಅಲಂಕರಿಸಲಿವೆ. ಮಾರ್ಚ 24ರಂದು ರಾತ್ರಿ ನಡೆಯುವ ಪ್ರಥಮ ತೆಪ್ಪೋತ್ಸವದಂದು ಮುತ್ತುಮುಡಿ ಅಲಂಕಾರದೊಂದಿಗೆ ಈ ಎಲ್ಲಾ ಆಭರಣಗಳನ್ನು ಧರಿಸಲಾಗುತ್ತದೆ.
ಇದರ ಜೊತೆಗೆ ವೈರಮುಡಿಯಂದು ಜಿಲ್ಲಾ ಖಜಾನೆಯಿಂದ ಬರುವ ವೈರಮುಡಿ-ರಾಜಮುಡಿ ಹಾಗೂ 16 ಬಗೆಯ ವಜ್ರಖಚಿತ ಆಭರಣಗಳೂ ಸಹ ಚೆಲುನಾರಾಯಣನನ್ನು ಬ್ರಹ್ಮೋತ್ಸವದಲ್ಲಿ ಅಲಂಕರಿಸಲಿದೆ. ವೈರಮುಡಿ ಕಿರೀಟಮಾತ್ರ ಒಂದು ರಾತ್ರಿ ಚೆಲುವನಾರಾಯಣನ್ನು ಅಲಂಕರಿಸಿದರೆ ಉಳಿದ ಆಭರಣಗಳು ಬ್ರಹ್ಮೋತ್ಸವ ಪೂರ್ತ ಸ್ವಾಮಿಯನ್ನು ಅಲಂಕರಿಸಿರುತ್ತವೆ.

ಈ ವೇಳೆ ಮಾಹಿತಿ ನೀಡಿದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಭಾರತದ ಅತ್ಯಂತ ಪುರಾತನ ಹಾಗೂ ಧಾರ್ಮಿಕ ವಿಶೇಷವಾದ ವೈರಮುಡಿ ಜಾತ್ರಾಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಬ್ರಹ್ಮೋತ್ಸವದ ಎಲ್ಲಾ ಉತ್ಸವಗಳನ್ನೂ ವೈಭವಯುತವಾಗಿ ನಡೆಸಲು ಶ್ರಮಿಸಲಾಗುತ್ತದೆ ಉತ್ಸವದಲ್ಲಿ ಸೇವೆಮಾಡುವ ಭಾಗ್ಯ ನಮಗೆ ದೊರೆತಿರುವುದೇ ದೊಡ್ಡಭಾಗ್ಯ ಎಂದೇ ಭಾವಿಸಿ ಭಕ್ತಸ್ನೇಹಿಯಾಗಿ ವ್ಯವಸ್ಥೆಮಾಡಲಾಗುತ್ತಿದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚೆಲುವನಾರಾಯಣಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದರು.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago