ಮಂಡ್ಯ

ವೈರಮುಡಿ ಬ್ರಹ್ಮೋತ್ಸವದ  ಪುರಾತನ ಆಭರಣಗಳ ಹಸ್ತಾಂತರ

ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು.
ಪಾಂಡವಪುರ ತಾಲ್ಲೂಕು ಖಜಾನೆಯಲ್ಲಿದ್ದ ತಿರುವಾಭರಣಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆಮಾಡಲಾಯಿತು. ಬಂಗಾರ, ಮುತ್ತು ಹಾಗೂ ವಜ್ರಖಚಿತ ಆಭರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಚೆಲುವನಾರಾಯಣಸ್ವಾಮಿಯ ಅಲಂಕಾರಕ್ಕಾಗಿ ನೀಡಲಾಯಿತು.

ಶಂಖ, ಚಕ್ರ, ಗದಾಂಗಿ ಕಿರೀಟ ಬಂಗಾರದ ಬಟ್ಟಲು ಮುತ್ತುಮುಡಿ, ಮುತ್ತಿನ ಸರಗಳು ಕೋರಂಬ ಹೀಗೆ 56 ವೈವಿಧ್ಯಮಯ ಆಭರಣಗಳನ್ನು ಒಂದೊಂದಾಗಿ ಪರಿಶೀಲಿಸಿ ದಾಖಲಿಸಿದ ನಂತರ ದೇವಾಲಯದ ಕೈಂಕರ್ಯಪರಿಗೆ ಹಸ್ತಾಂತರ ಮಾಡಲಾಯಿತು.

ಈ ವೇಳೆ ಸ್ಥಾನೀಕರಾದ ಕರಗಂ ನಾರಾಯಣ ಅಯ್ಯಂಗಾರ್, ಸ್ಥಾನೀಕಂ ಶ್ರೀನಿವಾಸನರಸಿಂಹನ್ ಗುರೂಜಿ, ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್, ಸ್ಥಾನೀಕಂ ಸಂಪತ್ಕುಮಾರನ್, ಸ್ಥಾನೀಕಂ ಶ್ರೀರಾಮನ್, ಪರಿಚಾರಕ ಪಾರ್ಥಸಾರಥಿ, ಅರ್ಚಕ ವರದರಾಜಭಟ್, ಪರಕಾಲಮಠದ ಪ್ರತಿನಿಧಿ ನರಸಿಂಹರಂಗನ್, ಅಕೌಂಟೆಂಟ್ ಹೇಮಂತಕುಮಾರ್, ಪ್ರಥಮದರ್ಜೆ ಸಹಾಯಕ ಪ್ರಕಾಶ್ ಪಾರ್ಕಾವಣೆಯಲ್ಲಿ ಭಾಗವಹಿಸಿದ್ದರು.

ಈ ಅಮೂಲ್ಯ ಪುರಾತನ ಆಭರಣಗಳು ಯುಗಾದಿ ಹಬ್ಬದಿಂದಲೇ ಚೆಲುವನಾರಾಯಣನನ್ನು ಅಲಂಕರಿಸಲಿವೆ. ಮಾರ್ಚ 24ರಂದು ರಾತ್ರಿ ನಡೆಯುವ ಪ್ರಥಮ ತೆಪ್ಪೋತ್ಸವದಂದು ಮುತ್ತುಮುಡಿ ಅಲಂಕಾರದೊಂದಿಗೆ ಈ ಎಲ್ಲಾ ಆಭರಣಗಳನ್ನು ಧರಿಸಲಾಗುತ್ತದೆ.
ಇದರ ಜೊತೆಗೆ ವೈರಮುಡಿಯಂದು ಜಿಲ್ಲಾ ಖಜಾನೆಯಿಂದ ಬರುವ ವೈರಮುಡಿ-ರಾಜಮುಡಿ ಹಾಗೂ 16 ಬಗೆಯ ವಜ್ರಖಚಿತ ಆಭರಣಗಳೂ ಸಹ ಚೆಲುನಾರಾಯಣನನ್ನು ಬ್ರಹ್ಮೋತ್ಸವದಲ್ಲಿ ಅಲಂಕರಿಸಲಿದೆ. ವೈರಮುಡಿ ಕಿರೀಟಮಾತ್ರ ಒಂದು ರಾತ್ರಿ ಚೆಲುವನಾರಾಯಣನ್ನು ಅಲಂಕರಿಸಿದರೆ ಉಳಿದ ಆಭರಣಗಳು ಬ್ರಹ್ಮೋತ್ಸವ ಪೂರ್ತ ಸ್ವಾಮಿಯನ್ನು ಅಲಂಕರಿಸಿರುತ್ತವೆ.

ಈ ವೇಳೆ ಮಾಹಿತಿ ನೀಡಿದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಭಾರತದ ಅತ್ಯಂತ ಪುರಾತನ ಹಾಗೂ ಧಾರ್ಮಿಕ ವಿಶೇಷವಾದ ವೈರಮುಡಿ ಜಾತ್ರಾಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಬ್ರಹ್ಮೋತ್ಸವದ ಎಲ್ಲಾ ಉತ್ಸವಗಳನ್ನೂ ವೈಭವಯುತವಾಗಿ ನಡೆಸಲು ಶ್ರಮಿಸಲಾಗುತ್ತದೆ ಉತ್ಸವದಲ್ಲಿ ಸೇವೆಮಾಡುವ ಭಾಗ್ಯ ನಮಗೆ ದೊರೆತಿರುವುದೇ ದೊಡ್ಡಭಾಗ್ಯ ಎಂದೇ ಭಾವಿಸಿ ಭಕ್ತಸ್ನೇಹಿಯಾಗಿ ವ್ಯವಸ್ಥೆಮಾಡಲಾಗುತ್ತಿದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚೆಲುವನಾರಾಯಣಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago