ಮಂಡ್ಯ

ವೈರಮುಡಿ ಬ್ರಹ್ಮೋತ್ಸವದ  ಪುರಾತನ ಆಭರಣಗಳ ಹಸ್ತಾಂತರ

ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು.
ಪಾಂಡವಪುರ ತಾಲ್ಲೂಕು ಖಜಾನೆಯಲ್ಲಿದ್ದ ತಿರುವಾಭರಣಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆಮಾಡಲಾಯಿತು. ಬಂಗಾರ, ಮುತ್ತು ಹಾಗೂ ವಜ್ರಖಚಿತ ಆಭರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಚೆಲುವನಾರಾಯಣಸ್ವಾಮಿಯ ಅಲಂಕಾರಕ್ಕಾಗಿ ನೀಡಲಾಯಿತು.

ಶಂಖ, ಚಕ್ರ, ಗದಾಂಗಿ ಕಿರೀಟ ಬಂಗಾರದ ಬಟ್ಟಲು ಮುತ್ತುಮುಡಿ, ಮುತ್ತಿನ ಸರಗಳು ಕೋರಂಬ ಹೀಗೆ 56 ವೈವಿಧ್ಯಮಯ ಆಭರಣಗಳನ್ನು ಒಂದೊಂದಾಗಿ ಪರಿಶೀಲಿಸಿ ದಾಖಲಿಸಿದ ನಂತರ ದೇವಾಲಯದ ಕೈಂಕರ್ಯಪರಿಗೆ ಹಸ್ತಾಂತರ ಮಾಡಲಾಯಿತು.

ಈ ವೇಳೆ ಸ್ಥಾನೀಕರಾದ ಕರಗಂ ನಾರಾಯಣ ಅಯ್ಯಂಗಾರ್, ಸ್ಥಾನೀಕಂ ಶ್ರೀನಿವಾಸನರಸಿಂಹನ್ ಗುರೂಜಿ, ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್, ಸ್ಥಾನೀಕಂ ಸಂಪತ್ಕುಮಾರನ್, ಸ್ಥಾನೀಕಂ ಶ್ರೀರಾಮನ್, ಪರಿಚಾರಕ ಪಾರ್ಥಸಾರಥಿ, ಅರ್ಚಕ ವರದರಾಜಭಟ್, ಪರಕಾಲಮಠದ ಪ್ರತಿನಿಧಿ ನರಸಿಂಹರಂಗನ್, ಅಕೌಂಟೆಂಟ್ ಹೇಮಂತಕುಮಾರ್, ಪ್ರಥಮದರ್ಜೆ ಸಹಾಯಕ ಪ್ರಕಾಶ್ ಪಾರ್ಕಾವಣೆಯಲ್ಲಿ ಭಾಗವಹಿಸಿದ್ದರು.

ಈ ಅಮೂಲ್ಯ ಪುರಾತನ ಆಭರಣಗಳು ಯುಗಾದಿ ಹಬ್ಬದಿಂದಲೇ ಚೆಲುವನಾರಾಯಣನನ್ನು ಅಲಂಕರಿಸಲಿವೆ. ಮಾರ್ಚ 24ರಂದು ರಾತ್ರಿ ನಡೆಯುವ ಪ್ರಥಮ ತೆಪ್ಪೋತ್ಸವದಂದು ಮುತ್ತುಮುಡಿ ಅಲಂಕಾರದೊಂದಿಗೆ ಈ ಎಲ್ಲಾ ಆಭರಣಗಳನ್ನು ಧರಿಸಲಾಗುತ್ತದೆ.
ಇದರ ಜೊತೆಗೆ ವೈರಮುಡಿಯಂದು ಜಿಲ್ಲಾ ಖಜಾನೆಯಿಂದ ಬರುವ ವೈರಮುಡಿ-ರಾಜಮುಡಿ ಹಾಗೂ 16 ಬಗೆಯ ವಜ್ರಖಚಿತ ಆಭರಣಗಳೂ ಸಹ ಚೆಲುನಾರಾಯಣನನ್ನು ಬ್ರಹ್ಮೋತ್ಸವದಲ್ಲಿ ಅಲಂಕರಿಸಲಿದೆ. ವೈರಮುಡಿ ಕಿರೀಟಮಾತ್ರ ಒಂದು ರಾತ್ರಿ ಚೆಲುವನಾರಾಯಣನ್ನು ಅಲಂಕರಿಸಿದರೆ ಉಳಿದ ಆಭರಣಗಳು ಬ್ರಹ್ಮೋತ್ಸವ ಪೂರ್ತ ಸ್ವಾಮಿಯನ್ನು ಅಲಂಕರಿಸಿರುತ್ತವೆ.

ಈ ವೇಳೆ ಮಾಹಿತಿ ನೀಡಿದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಭಾರತದ ಅತ್ಯಂತ ಪುರಾತನ ಹಾಗೂ ಧಾರ್ಮಿಕ ವಿಶೇಷವಾದ ವೈರಮುಡಿ ಜಾತ್ರಾಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಬ್ರಹ್ಮೋತ್ಸವದ ಎಲ್ಲಾ ಉತ್ಸವಗಳನ್ನೂ ವೈಭವಯುತವಾಗಿ ನಡೆಸಲು ಶ್ರಮಿಸಲಾಗುತ್ತದೆ ಉತ್ಸವದಲ್ಲಿ ಸೇವೆಮಾಡುವ ಭಾಗ್ಯ ನಮಗೆ ದೊರೆತಿರುವುದೇ ದೊಡ್ಡಭಾಗ್ಯ ಎಂದೇ ಭಾವಿಸಿ ಭಕ್ತಸ್ನೇಹಿಯಾಗಿ ವ್ಯವಸ್ಥೆಮಾಡಲಾಗುತ್ತಿದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚೆಲುವನಾರಾಯಣಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದರು.

andolanait

Recent Posts

ಜನಮೆಚ್ಚಿದ್ದ ಆರ್ಕೆಸ್ಟ್ರಾ ; ಬದಲಾದ ಕ್ರೇಜ್

ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ,…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಮಾನವ್‌ ಸೋನಿ ಎಂಬ ಮಾನವೀಯ ಕಳಕಳಿಯ ಮನಸ್ಸು

ʼಫನ್‌ ಸ್ಮಾರ್ಟ್‌ ನಾಲೆಡ್ಜ್‌ ಸಲ್ಯೂಶನ್‌ ಫೌಂಡೇಶನ್‌ʼ ಮೂಲಕ ಮಾನವೀಯ ಸೇವೆ   ೨೬ ವರ್ಷ ಪ್ರಾಯದ, ಕೊಲ್ಕೊತ್ತಾದ ಮಾನವ್ ಸೋನಿ…

2 hours ago

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

5 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

21 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

21 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

22 hours ago