ಮಂಡ್ಯ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ದೈಹಿಕವಾಗಿ ಪರಿನಿರ್ವಾಣ ಹೊಂದಿ 68 ವರ್ಷ ಕಳೆದರೂ, ಅವರ ಕೊಡುಗೆ, ಆದರ್ಶ ಚಿಂತನೆ ಹಾಗೂ ಸಾಮಾಜಿಕ ಮೌಲ್ಯಗಳು ಎಂದಿಗೂ ಜೀವಂತವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಂಬೇಡ್ಕರ್ ಚಿಂತನೆ, ತತ್ವ ಹಾಗೂ ಆದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.
ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ।। ಬಿ.ಆರ್.ಅಂಬೇಡ್ಕರ್ ರವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶ ಕಂಡಂತಹ ಹೊಸ ಶಕ್ತಿ ಹಾಗೂ ಚೇತನವಾಗಿದ್ದು, ದೇಶಕ್ಕೆ ಅತಿ ದೊಡ್ಡ ಸಂವಿಧಾನವನ್ನು ಕೊಟ್ಟಂತ ಮಹಾನಾಯಕ. ಅಂತಹ ಚೈತನ್ಯ ನಮ್ಮ ದೇಶಕ್ಕೆ ದಕ್ಕಿದ್ದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.
ಅಂಬೇಡ್ಕರ್ ಅವರು ಕಂಡಂತಹ ಕನಸಿನ ಅನುಗುಣವಾಗಿ ಸಂವಿಧಾನದ ಆಶಯಗಳಂತೆ ಪಣತೊಟ್ಟು ನಾವೆಲ್ಲರೂ ಬದುಕಬೇಕು.ಅವರ ಚಿಂತನೆಗಳನ್ನು ನಮ್ಮ ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್ ಮಾತನಾಡಿ, ಇಂದು ಬಾಬಾ ಸಾಹೇಬ್ ಡಾ।। ಬಿ.ಆರ್.ಅಂಬೇಡ್ಕರ್ ರವರ 68ನೇ ಪರಿನಿರ್ವಾಣ ದಿನವಾಗಿದೆ. ಅವರು ಬರೆದಿರುವ ಪುಸ್ತಕಗಳು ಪ್ರಸ್ತುತ ದಿನದಲ್ಲಿಯೂ ಜೀವಂತವಾಗಿದೆ. ನಮ್ಮ ದೇಶಕ್ಕೆ ಅವರು ಕೊಟ್ಟಿರುವ ಸಂವಿಧಾನವು ನಮ್ಮ ಬದುಕಿಗೆ ದಾರಿಯಾಗಿದೆ. ಅವರು ಪ್ರತಿಯೊಬ್ಬರಿಗೂ ಸಮಾನತೆ, ಐಕ್ಯತೆ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಸಂವಿಧಾನದ ಮೂಲಕ ನೀಡಿ ಜನರಿಗೆ ಶಕ್ತಿ ತುಂಬಿದ್ದಾರೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನದ ಆಧಾರದ ಮೇಲೆ ಇಂದಿಗೂ ಕಾನೂನು ವ್ಯವಸ್ಥೆ ನಿಂತಿದೆ. ಇವತ್ತಿನ ಕಾಲಮಾನಕ್ಕೂ ಪ್ರಸ್ತುತವಾದ ಸಂವಿಧಾನವನ್ನು ಭಾರತಕ್ಕೆ ನೀಡಿದ ಮಹಾನ್ ಚೇತನರಾಗಿದ್ದು, ಇನ್ನೂ ಸಾವಿರಾರು ವರ್ಷ ಕಳೆದರೂ ಬಾಬ ಸಾಹೇಬ್ ಹೆಸರು ಅಜರಾಮರ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…