ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ಮಂಡ್ಯದಲ್ಲಿ ಸಾಫ್ಟ್ವೇರ್ ಪಾರ್ಕ್ ನಿರ್ಮಾಣ, ಪ್ರವಾಸೋದ್ಯಮ ಅಭಿವೃದ್ಧಿ, ಕೋಲ್ಡ್ ಸ್ಟೋರೇಜ್ ಸ್ಥಾಪನೆ, ನಾಲೆಗಳ ಆಧುನಿಕರಣ, ಹೊಸ ಸೇತುವೆ ನಿರ್ಮಾಣ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ ಜಾರಿ, ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ, ಯುವಕರಿಗೆ ಉದ್ಯೋಗ ಸೃಷ್ಠಿ, ಹಣ್ಣು ತರಕಾರಿಗಳ ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಮದ್ದೂರು ಪಟ್ಟಣ ನವೀಕರಣಕ್ಕೆ ಆದ್ಯತೆ, ಮಳವಳ್ಳಿಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ, ನಾಗಮಂಗಲಕ್ಕೆ ಕೆರೆ ತುಂಬಿಸುವ ಯೋಜನೆ, ಗಾರ್ಮೆಂಟ್ಸ್ ಸ್ಥಾಪನೆಗೆ ಒತ್ತು, ಮೇಲುಕೊಟೆ-ಪಾಂಡವಪುರಕ್ಕೆ ಸುಸ್ಥಿರ ಕೃಷಿ ಪದ್ಧತಿ ಜಾರಿ, ಪಂಚಾಯ್ತಿಗೊಂದು ಶಾಲೆ, ಶ್ರೀರಂಗಪಟ್ಟಣದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು, ಜೊತೆಗೆ ನಾಲೆಗಳ ಆಧುನಿಕರಣ, ಪ್ರತಿ ಗ್ರಾಮಕ್ಕೆ ಮೂಲಸೌಕರ್ಯ, ಕೆ.ಆರ್ ನಗರ ಕಬ್ಬು ಬೆಳೆಗಾರರಿಗೆ ಶಾಶ್ವತ ಪರಿಹಾರ ಸೇರಿದಂತೆ ಹತ್ತು ಹಲವು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…