ಮಂಡ್ಯ

ವಿವಿಧ ಬೇಡಿಕೆ ಒತ್ತಾಯಿಸಿ ರಾಜ್ಯಾದ್ಯಾಂತ ಈಡುಗಾಯಿ ಒಡೆಯುವ ಚಳವಳಿ ; ವಾಟಾಳ್‌ ನಾಗರಾಜ್‌

ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡಲಾಗುತ್ತಿದ್ದು, ೧೯೫೬ರಲ್ಲಿ ಕರ್ನಾಟಕ ಏಕೀಕರಣ ಸಂದರ್ಭದಿಂದಲೂ ಹೋರಾಟ ಮಾಡಲಾಗಿದೆ. ಆದರೂ ಅಂದಿನಿಂದ ಎಲ್ಲ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಎಂಇಎಸ್ ರಾಜ್ಯದ ಗಡಿನಾಡಿಗೆ ಮಾರಕ. ಎಂಇಎಸ್ ನಿಷೇಧಕ್ಕೆ ಹಲವು ವರ್ಷಗಳಿಂದ ಹೋರಾಟ ಕನ್ನಡಿಗರು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇಂದಿಗೂ ಅದನ್ನು ಯಾವುದೇ ರಾಜ್ಯ ಸರ್ಕಾರ ಇಡೇರಿಸಿಲ್ಲ ಎಂದು ಗುಡುಗಿದರು.

ಕಳಸಬಂಡೂರಿ, ಮೇಕೆದಾಟು ಜಾರಿಯಾಗಿಲ್ಲ, ರಾಜ್ಯದಲ್ಲಿ ಪರಭಾಷಿಕರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಪರಭಾಷಿಕರಿಂದ ಅಪರಾಧ ಕೃತ್ಯಗಳೂ ಹೆಚ್ಚಾಗಿವೆ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ ವಾಟಾಳ್ ನಾಗರಾಜ್ ಕನ್ನಡಿಗರಿಗೆ ಉದ್ಯೋಗದ ಬಗ್ಗೆ ಕ್ರಮ ಕೈಗೊಂಡಿಲ್ಲ, ಅದಕ್ಕೆ ಪೂರಕವಾದ ಸರೋಜಿನಿಮಹಿಷಿ ವರದಿ ಜಾರಿಯಾಗಿಲ್ಲ. ಐಟಿಬಿಟಿ ಮಸೂದೆ ಜಾರಿಯಾಗಿಲ್ಲ. ಈ ಬಗ್ಗೆಯೂ ಗಂಭೀರ ಚಿಂತನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಕಳೆದ ಮಾರ್ಚ್ ೨೨ರಂದು ಬಂದ್ ಕರೆ ಕೊಟ್ಟಿದ್ದೆವು. ಮಂಡ್ಯದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಕ್ಕೆ ಮಂಡ್ಯ ಜನಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ಏ.೨೬ಕ್ಕೆ ರಾಜ್ಯದ ಉದ್ದಗಲಕ್ಕೂ ಈಡುಗಾಯಿ ಒಡೆಯುವ ಚಳವಳಿ ಮೂಲಕ ವಿಶೇಷ, ವಿನೂತನವಾಗಿ ಮತ್ತೊಂದು ಹೋರಾಟ ಮಾಡಲಾಗುತ್ತಿದ್ದು, ಎಂಇಎಸ್ ನಿಷೇಧ. ಉತ್ತರ ಕರ್ನಾಟಕ ಅಭಿವೃದ್ಧಿ, ಪರಭಾಷಿಕರ ದಬ್ಬಾಳಿಕೆ, ಪರಭಾಷಿಕರ ಚಿತ್ರಗಳ ಬಹಿಷ್ಕಾರ, ಕೇಂದ್ರದ ಮಲತಾಯಿ ಧೋರಣೆ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಖಂಡಿಸಿ ಕನ್ನಡಿಗರ ಬೇಡಿಕೆ ಈಡೇರಿಕೆಗಾಗಿ ಕನಿಷ್ಠ ಎರಡು ಕೋಟಿ ಈಡುಗಾಯಿ ಒಡೆಯುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಜಾತಿಗಣತಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇವತ್ತಿನವರೆಗೂ ಜಾತಿ ಬಗ್ಗೆ ಮಾತಾಡಿಲ್ಲ.ಅದನ್ನ ಯಾಕೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ರಾಜ್ಯ ಉದಯವಾಗಿದ್ದು ಭಾಷೆ ಮೇಲೆ. ಭಾಷೆ ಮೇಲೆ ಕರ್ನಾಟಕದ ಉದಯವಾಯಿತು. ಕುವೆಂಪು ಅವರು ಮೈಸೂರಿನಲ್ಲಿ ಸಮಗ್ರ ಕರ್ನಾಟಕ ಆಗಬೇಕು ಎಂದಿದ್ದರು. ಆದರೆ ಇವತ್ತು ಜಾತಿಯ ಕರ್ನಾಟಕ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಸವಣ್ಣ, ಕನಕದಾಸರ ಸಂದೇಶಗಳನ್ನ ಅರ್ಥ ಮಾಡಿಕೊಳ್ಳಬೇಕು. ಒಂದು ಪಕ್ಷ ಅಲ್ಲ, ಎಲ್ಲಾ ಪಕ್ಷಗಳು ಜಾತಿ ಹಿಂದೆ ಬಿದ್ದಿವೆ. ಸಿದ್ದರಾಮಯ್ಯನವರೇ ಕರ್ನಾಟಕದ ಕೊನೆಯ ಕೊಂಡಿ. ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಏನಾಗುತ್ತೋ ಗೊತ್ತಿಲ್ಲ. ಮುಂದೆ ಬರುವವರು ಯಾವ ಯಾವ ಆಧಾರದಲ್ಲಿ ಅಧಿಕಾರಕ್ಕೆ ಬರುತ್ತಾರೋ ಗೊತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಶಾಸನ ಸಭೆಯಲ್ಲಿ ಈ ವಿಷಯ ಚರ್ಚೆ ಬೇಕೆ?. ಶಾಸನಸಭೆಯ ಗಂಭೀರತೆ ಏನಾಗಬೇಕು?. ವಿಧಾನಸಭೆ, ಪರಿಷತ್ತಿನ ಘನತೆ, ಗಾಂಭೀರ್ಯ ಕುಸಿಯುತ್ತಿದೆ. ಎಲ್ಲರೂ ದುಡ್ಡಿನ ಮೇಲೆ ಅಧಿಕಾರಕ್ಕೆ ಬರುವವರೇ ಆಗಿದ್ದಾರೆ. ವಿಧಾನಪರಿಷತ್ತು ವ್ಯಾಪಾರೀಕರಣ ಆಗುತ್ತಿದೆ. ಪರಿಷತ್ತಿಗೆ ನಾಲ್ಕು ಸ್ಥಾನಗಳಿಗೆ ನಾಮಕರಣ ಆಗಬೇಕಿದೆ. ಅದನ್ನೂ ಹಂಚಿಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಾರ್ಥ ಸಾರಥಿ, ಮಂಜುನಾಥ್ ಬೆಟ್ಟಹಳ್ಳಿ, ಹೆಚ್.ಸಿ.ಮಂಜುನಾಥ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

6 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

10 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

11 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

11 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

11 hours ago