ಮಂಡ್ಯ

ವಿವಿಧ ಬೇಡಿಕೆ ಒತ್ತಾಯಿಸಿ ರಾಜ್ಯಾದ್ಯಾಂತ ಈಡುಗಾಯಿ ಒಡೆಯುವ ಚಳವಳಿ ; ವಾಟಾಳ್‌ ನಾಗರಾಜ್‌

ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡಲಾಗುತ್ತಿದ್ದು, ೧೯೫೬ರಲ್ಲಿ ಕರ್ನಾಟಕ ಏಕೀಕರಣ ಸಂದರ್ಭದಿಂದಲೂ ಹೋರಾಟ ಮಾಡಲಾಗಿದೆ. ಆದರೂ ಅಂದಿನಿಂದ ಎಲ್ಲ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಎಂಇಎಸ್ ರಾಜ್ಯದ ಗಡಿನಾಡಿಗೆ ಮಾರಕ. ಎಂಇಎಸ್ ನಿಷೇಧಕ್ಕೆ ಹಲವು ವರ್ಷಗಳಿಂದ ಹೋರಾಟ ಕನ್ನಡಿಗರು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇಂದಿಗೂ ಅದನ್ನು ಯಾವುದೇ ರಾಜ್ಯ ಸರ್ಕಾರ ಇಡೇರಿಸಿಲ್ಲ ಎಂದು ಗುಡುಗಿದರು.

ಕಳಸಬಂಡೂರಿ, ಮೇಕೆದಾಟು ಜಾರಿಯಾಗಿಲ್ಲ, ರಾಜ್ಯದಲ್ಲಿ ಪರಭಾಷಿಕರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಪರಭಾಷಿಕರಿಂದ ಅಪರಾಧ ಕೃತ್ಯಗಳೂ ಹೆಚ್ಚಾಗಿವೆ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ ವಾಟಾಳ್ ನಾಗರಾಜ್ ಕನ್ನಡಿಗರಿಗೆ ಉದ್ಯೋಗದ ಬಗ್ಗೆ ಕ್ರಮ ಕೈಗೊಂಡಿಲ್ಲ, ಅದಕ್ಕೆ ಪೂರಕವಾದ ಸರೋಜಿನಿಮಹಿಷಿ ವರದಿ ಜಾರಿಯಾಗಿಲ್ಲ. ಐಟಿಬಿಟಿ ಮಸೂದೆ ಜಾರಿಯಾಗಿಲ್ಲ. ಈ ಬಗ್ಗೆಯೂ ಗಂಭೀರ ಚಿಂತನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಕಳೆದ ಮಾರ್ಚ್ ೨೨ರಂದು ಬಂದ್ ಕರೆ ಕೊಟ್ಟಿದ್ದೆವು. ಮಂಡ್ಯದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಕ್ಕೆ ಮಂಡ್ಯ ಜನಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ಏ.೨೬ಕ್ಕೆ ರಾಜ್ಯದ ಉದ್ದಗಲಕ್ಕೂ ಈಡುಗಾಯಿ ಒಡೆಯುವ ಚಳವಳಿ ಮೂಲಕ ವಿಶೇಷ, ವಿನೂತನವಾಗಿ ಮತ್ತೊಂದು ಹೋರಾಟ ಮಾಡಲಾಗುತ್ತಿದ್ದು, ಎಂಇಎಸ್ ನಿಷೇಧ. ಉತ್ತರ ಕರ್ನಾಟಕ ಅಭಿವೃದ್ಧಿ, ಪರಭಾಷಿಕರ ದಬ್ಬಾಳಿಕೆ, ಪರಭಾಷಿಕರ ಚಿತ್ರಗಳ ಬಹಿಷ್ಕಾರ, ಕೇಂದ್ರದ ಮಲತಾಯಿ ಧೋರಣೆ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಖಂಡಿಸಿ ಕನ್ನಡಿಗರ ಬೇಡಿಕೆ ಈಡೇರಿಕೆಗಾಗಿ ಕನಿಷ್ಠ ಎರಡು ಕೋಟಿ ಈಡುಗಾಯಿ ಒಡೆಯುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಜಾತಿಗಣತಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇವತ್ತಿನವರೆಗೂ ಜಾತಿ ಬಗ್ಗೆ ಮಾತಾಡಿಲ್ಲ.ಅದನ್ನ ಯಾಕೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ರಾಜ್ಯ ಉದಯವಾಗಿದ್ದು ಭಾಷೆ ಮೇಲೆ. ಭಾಷೆ ಮೇಲೆ ಕರ್ನಾಟಕದ ಉದಯವಾಯಿತು. ಕುವೆಂಪು ಅವರು ಮೈಸೂರಿನಲ್ಲಿ ಸಮಗ್ರ ಕರ್ನಾಟಕ ಆಗಬೇಕು ಎಂದಿದ್ದರು. ಆದರೆ ಇವತ್ತು ಜಾತಿಯ ಕರ್ನಾಟಕ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಸವಣ್ಣ, ಕನಕದಾಸರ ಸಂದೇಶಗಳನ್ನ ಅರ್ಥ ಮಾಡಿಕೊಳ್ಳಬೇಕು. ಒಂದು ಪಕ್ಷ ಅಲ್ಲ, ಎಲ್ಲಾ ಪಕ್ಷಗಳು ಜಾತಿ ಹಿಂದೆ ಬಿದ್ದಿವೆ. ಸಿದ್ದರಾಮಯ್ಯನವರೇ ಕರ್ನಾಟಕದ ಕೊನೆಯ ಕೊಂಡಿ. ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಏನಾಗುತ್ತೋ ಗೊತ್ತಿಲ್ಲ. ಮುಂದೆ ಬರುವವರು ಯಾವ ಯಾವ ಆಧಾರದಲ್ಲಿ ಅಧಿಕಾರಕ್ಕೆ ಬರುತ್ತಾರೋ ಗೊತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಶಾಸನ ಸಭೆಯಲ್ಲಿ ಈ ವಿಷಯ ಚರ್ಚೆ ಬೇಕೆ?. ಶಾಸನಸಭೆಯ ಗಂಭೀರತೆ ಏನಾಗಬೇಕು?. ವಿಧಾನಸಭೆ, ಪರಿಷತ್ತಿನ ಘನತೆ, ಗಾಂಭೀರ್ಯ ಕುಸಿಯುತ್ತಿದೆ. ಎಲ್ಲರೂ ದುಡ್ಡಿನ ಮೇಲೆ ಅಧಿಕಾರಕ್ಕೆ ಬರುವವರೇ ಆಗಿದ್ದಾರೆ. ವಿಧಾನಪರಿಷತ್ತು ವ್ಯಾಪಾರೀಕರಣ ಆಗುತ್ತಿದೆ. ಪರಿಷತ್ತಿಗೆ ನಾಲ್ಕು ಸ್ಥಾನಗಳಿಗೆ ನಾಮಕರಣ ಆಗಬೇಕಿದೆ. ಅದನ್ನೂ ಹಂಚಿಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಾರ್ಥ ಸಾರಥಿ, ಮಂಜುನಾಥ್ ಬೆಟ್ಟಹಳ್ಳಿ, ಹೆಚ್.ಸಿ.ಮಂಜುನಾಥ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

16 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

2 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

16 hours ago