ಮಂಡ್ಯ: ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ ನೀರು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ.
ಕಳೆದ 2018ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಇಂದಿನವರೆಗೂ ನಾಲೆಗೆ ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರು ಪದೇ ಪದೇ ಆಗ್ರಹಿಸುತ್ತಲೇ ಬಂದಿದ್ದು, ಜಿಲ್ಲಾಡಳಿತ ಮಾತ್ರ ಕಂಡು ಕಾಣದಂತೆ ಭಾರೀ ನಿರ್ಲಕ್ಷ್ಯ ತೋರುತ್ತಿದೆ.
ವಿಸಿ ನಾಲೆಯಲ್ಲಿನ ಕಿರಿದಾದ ರಸ್ತೆ, ತಡೆಗೋಡೆ ಇಲ್ಲದ ಕಾರಣ ಈ ದುರಂತ ಸಂಭವಿಸುತ್ತಿದೆ. 560 ಕಿ.ಮೀ ಉದ್ದದ ವಿಸಿ ನಾಲೆ ಇದ್ದು, ನಾಲೆಯ ಯಾವ ಜಾಗ ಅಪಾಯಕಾರಿಯಾಗಿದೆ ಎಂದು ತಿಳಿಯಲು ವಿಶೇಷ ತಂಡವನ್ನು ನಿಯೋಜನೆ ಮಾಡಲಾಗಿತ್ತು. ಆ ತಂಡ ಅಪಘಾತ ಸ್ಥಳವನ್ನು ಗುರುತು ಮಾಡಿದೆ. ಆದರೆ ಇಲ್ಲಿಯವರೆಗೆ ನಾಲೆಯ ಪಕ್ಕ ತಡೆಗೋಡೆಗಳನ್ನು ನಿರ್ಮಾಣ ಮಾಡಿಲ್ಲ. ಇದರಿಂದ ದಿನೇ ದಿನೇ ಈ ರೀತಿಯ ಘಟನೆಗಳು ಜರುಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…