ಮಂಡ್ಯ

ಸ್ಮಶಾನ ಒತ್ತುವರಿ ಆರೋಪ : ವ್ಯಕ್ತಿ ವಿರುದ್ಧ ಜಿಲ್ಲಾಧಿಕಾರಿಗೆ ಗ್ರಾಮಸ್ಥರ ದೂರು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧೀಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚೆನ್ನನಕೆರೆ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸರ್ಕಾರವು 1997-98ನೇ ಸಾಲಿನಲ್ಲಿ ಸರ್ವೆ ನಂ.78 ರಲ್ಲಿ 1.19 ಎಕರೆ ಜಾಗವನ್ನು ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಮಂಜೂರು ಮಾಡಿದೆ. ಜಕ್ಕನಹಳ್ಳಿ ಗ್ರಾಮದ ಜೆ.ಆರ್ ಬಾಲಕೃಷ್ಣ ಎಂಬವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಸರ್ವೆ ನಂ.78ರಲ್ಲಿ ಪರವನಾಗಿ ಎಸ್.ವೈ. ನಂ.-78, ಕ್ಯೂಎಲ್-333 ಮತ್ತು ಕ್ಯೂಎಲ್-605 ರಲ್ಲಿ ಗಣಿಗಾರಿಕೆ ಮಾಡಲು ಪರವಾನಗಿ ಕೊಟ್ಟಿರುತ್ತಾರೆ. ಆದರೆ, ಬಾಲಕೃಷ್ಣ ಅವರು ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ಮಾಡುತ್ತಿದ್ದಾರೆ. ಇದರ ಜತೆ ಇದೇ ಸರ್ವೆ ನಂ.78 ರಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನದಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ. ಅಲ್ಲದೆ, ಪರವನಾಗಿ ಪಡೆಯದೆ ಸರ್ಕಾರಕ್ಕೆ ಸೇರಿದ 4 ರಿಂದ 5 ಎಕರೆ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಲಿಂಗರಾಜು, ಆರ್.ಮಹದೇವ್, ಮದನ್, ಭರತ್, ಪ್ರಜ್ವಲ್, ಸಿ.ಎಲ್. ಕೃಷ್ಣ, ಸಿ.ಕೆ. ನಿಂಗರಾಜು, ಮಹದೇವು, ಸಂತೋಷ್ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

15 mins ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

2 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

2 hours ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

2 hours ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

3 hours ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

5 hours ago