ಮಂಡ್ಯ

ಸ್ಮಶಾನ ಒತ್ತುವರಿ ಆರೋಪ : ವ್ಯಕ್ತಿ ವಿರುದ್ಧ ಜಿಲ್ಲಾಧಿಕಾರಿಗೆ ಗ್ರಾಮಸ್ಥರ ದೂರು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧೀಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚೆನ್ನನಕೆರೆ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸರ್ಕಾರವು 1997-98ನೇ ಸಾಲಿನಲ್ಲಿ ಸರ್ವೆ ನಂ.78 ರಲ್ಲಿ 1.19 ಎಕರೆ ಜಾಗವನ್ನು ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಮಂಜೂರು ಮಾಡಿದೆ. ಜಕ್ಕನಹಳ್ಳಿ ಗ್ರಾಮದ ಜೆ.ಆರ್ ಬಾಲಕೃಷ್ಣ ಎಂಬವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಸರ್ವೆ ನಂ.78ರಲ್ಲಿ ಪರವನಾಗಿ ಎಸ್.ವೈ. ನಂ.-78, ಕ್ಯೂಎಲ್-333 ಮತ್ತು ಕ್ಯೂಎಲ್-605 ರಲ್ಲಿ ಗಣಿಗಾರಿಕೆ ಮಾಡಲು ಪರವಾನಗಿ ಕೊಟ್ಟಿರುತ್ತಾರೆ. ಆದರೆ, ಬಾಲಕೃಷ್ಣ ಅವರು ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ಮಾಡುತ್ತಿದ್ದಾರೆ. ಇದರ ಜತೆ ಇದೇ ಸರ್ವೆ ನಂ.78 ರಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನದಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ. ಅಲ್ಲದೆ, ಪರವನಾಗಿ ಪಡೆಯದೆ ಸರ್ಕಾರಕ್ಕೆ ಸೇರಿದ 4 ರಿಂದ 5 ಎಕರೆ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಲಿಂಗರಾಜು, ಆರ್.ಮಹದೇವ್, ಮದನ್, ಭರತ್, ಪ್ರಜ್ವಲ್, ಸಿ.ಎಲ್. ಕೃಷ್ಣ, ಸಿ.ಕೆ. ನಿಂಗರಾಜು, ಮಹದೇವು, ಸಂತೋಷ್ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago