ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ದಲಿತ ಜನಾಂಗದ ಸಿದ್ದಯ್ಯ (55) ಎಂಬ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಶವ ಸಂಸ್ಕಾರ ಮಾಡಲು ಜಾಗವಿಲ್ಲ ಎಂದು ಗ್ರಾಮಸ್ಥರು ದೂರಿದರು.
ಗ್ರಾಮದ ಎಲ್ಲಾ ಜನಾಂಗಕ್ಕೂ ಪ್ರತ್ಯೇಕ ಸ್ಮಶಾಣವಿದ್ದು, ದಲಿತ ಜನಾಂಗದವರಿಗೆ ಸ್ಮಶಾಣ ಇಲ್ಲದಂತಾಗಿದೆ. ಈ ಹಿಂದೆ ಗ್ರಾಮದ ಸರ್ವೆ ನಂ 84 ರಲ್ಲಿ ಸ್ಮಶಾನ ಜಾಗ ನಿಗದಿಪಡಿಸಲಾಗಿತ್ತು. ಆದರೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿದ್ದು ನಮ್ಮ ಜನಾಂಗದವರು ಮೃತಪಟ್ಟಲ್ಲಿ ಸ್ಮಶಾಣ ಇಲ್ಲದಂತಾಗಿದೆ.
ಈ ಸಂಬಂಧ ಅಧಿಕಾರಿಗಳು ಇತ್ತ ಗಮನ ಹರಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವವರೆವಿಗೂ ಶವ ಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.
ಈ ವೇಳೆ ಉಪತಹಸೀಲ್ದಾರ್ ದಿನೇಶ್ ಸ್ಥಳಕ್ಕೆ ಆಗಮಿಸಿ, ಮೇಲಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದು ಸ್ಮಶಾನಕ್ಕೆ ಜಾಗ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದು, ಶವ ಸಂಸ್ಕಾರ ನೆರವೇರಿಸಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…