ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ದಲಿತ ಜನಾಂಗದ ಸಿದ್ದಯ್ಯ (55) ಎಂಬ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಶವ ಸಂಸ್ಕಾರ ಮಾಡಲು ಜಾಗವಿಲ್ಲ ಎಂದು ಗ್ರಾಮಸ್ಥರು ದೂರಿದರು.
ಗ್ರಾಮದ ಎಲ್ಲಾ ಜನಾಂಗಕ್ಕೂ ಪ್ರತ್ಯೇಕ ಸ್ಮಶಾಣವಿದ್ದು, ದಲಿತ ಜನಾಂಗದವರಿಗೆ ಸ್ಮಶಾಣ ಇಲ್ಲದಂತಾಗಿದೆ. ಈ ಹಿಂದೆ ಗ್ರಾಮದ ಸರ್ವೆ ನಂ 84 ರಲ್ಲಿ ಸ್ಮಶಾನ ಜಾಗ ನಿಗದಿಪಡಿಸಲಾಗಿತ್ತು. ಆದರೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿದ್ದು ನಮ್ಮ ಜನಾಂಗದವರು ಮೃತಪಟ್ಟಲ್ಲಿ ಸ್ಮಶಾಣ ಇಲ್ಲದಂತಾಗಿದೆ.
ಈ ಸಂಬಂಧ ಅಧಿಕಾರಿಗಳು ಇತ್ತ ಗಮನ ಹರಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವವರೆವಿಗೂ ಶವ ಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.
ಈ ವೇಳೆ ಉಪತಹಸೀಲ್ದಾರ್ ದಿನೇಶ್ ಸ್ಥಳಕ್ಕೆ ಆಗಮಿಸಿ, ಮೇಲಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದು ಸ್ಮಶಾನಕ್ಕೆ ಜಾಗ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದು, ಶವ ಸಂಸ್ಕಾರ ನೆರವೇರಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…