ಮಂಡ್ಯ

ಮಂಡ್ಯ ಜಿಲ್ಲೆ ಪ್ರಗತಿಗೆ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿ: ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ/ಶ್ರೀರಂಗಪಟ್ಟಣ: ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಮಂಡ್ಯ ಜಿಲ್ಲೆಯ ಮಗ. ಪ್ರಸಕ್ತ ಚುನಾವಣೆಯಲ್ಲಿ ಅವರು ಗೆದ್ದರೆ ಅಭಿವೃದ್ಧಿ ಕೆಲಸಗಳು ಚುರುಕುಗೊಳ್ಳಲಿದ್ದು, ಜಿಲ್ಲೆಯ ಪ್ರಗತಿ ದೃಷ್ಠಿಯಿಂದ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮನವಿ ಮಾಡಿದರು.

ತಾಲೂಕಿನ ತಡಗವಾಡಿ ಗ್ರಾಮದಲ್ಲಿ ಶನಿವಾರ ಜೆಡಿಎಸ್‌ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಅವರನ್ನು ಅಭಿನಂದಿಸಿ ಮಾತನಾಡಿದರು.

ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಕಷ್ಟಗಳಿಗೆ ಯಾರು ಸ್ಪಂದಿಸುತ್ತಿಲ್ಲ. ಜೆಡಿಎಸ್‌ ಮುಖಂಡರು ಸಾಮಾನ್ಯರ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದರಿಂದ ಆ ಪಕ್ಷದ ಕಾರ್ಯಕರ್ತರು ಅತಂತ್ರಸ್ಥಿತಿಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಪಕ್ಷ ಸೇರುತ್ತಿದ್ದಾರೆ. ಕ್ಷೇತ್ರದ ವಿವಿಧೆಡೆ 500 ಕ್ಕೂ ಹೆಚ್ಚು ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ ಸೇರಿದ್ದು, ಮುಂದೆ ಇನ್ನಷ್ಟು ಮಂದಿ ಕಾಂಗ್ರೆಸ್‌ ಸೇರಲಿದ್ದಾರೆ. ಪಕ್ಷಕ್ಕೆ ಬರುವವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲೇ ಹುಟ್ಟಿ ಬೆಳೆದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು, ಸರಳ ಸಜ್ಜನಿಕೆಗೆ ಹೆಸರಾದವರು. ಅವರು ಗೆದ್ದರೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದರು.

ತಡಗವಾಡಿ ಗ್ರಾಮದ ಸಿದ್ದೇಗೌಡ, ರಮೇಶ್‌, ಜಿತಿನ್‌, ಬಸವರಾಜು, ಮಂಜು, ಪುಟ್ಟು, ಸಂತೋಷ್‌, ನವೀನ್‌, ಚಿಕ್ಕದೈಗೌಡ, ಬಳ್ಳಾರಿಗೌಡ, ಶಂಕರ್‌, ಸುರೇಶ್‌, ದೇವೇಗೌಡ, ಕೆಂಪಲಿಂಗೇಗೌಡ, ಮಲ್ಲಪ್ಪ, ಚಂದ್ರಹಾಸ, ಪೂಜಾರಿ, ನಿಂಗಣ್ಣ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದವರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

40 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

24 hours ago