ಮಂಡ್ಯ

ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ಮತ ನೀಡಿ: ಚಲುವರಾಯಸ್ವಾಮಿ

ಮಂಡ್ಯ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಮಾಡಿದ್ದೇವೆ, ಈ ಅವಧಿಯಲ್ಲೇ ಜಿಲ್ಲೆಗೆ ಶಾಶ್ವತ ಯೋಜನೆ ನೀಡಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿಕೆ ನೀಡಿದರು.

ನಗರದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಿ ಎಂದು ಮನವಿ ಮಾಡಿದರು. ಕೇಂದ್ರದಲ್ಲಿ ಆಡಳಿತ ನಡೆಸಿದ ಮೋದಿ ಹತ್ತು ವರ್ಷ ಸುಳ್ಳನ್ನೇ ಹೇಳಿದರು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಡೀ ದೇಶವನ್ನು ಸುತ್ತಾಡಿ ದೇಶದ ಸಮಸ್ಯೆಗಳನ್ನು ಕಂಡು ಪರಿಹಾರ ನೀಡುವಲ್ಲಿ ಶ್ರಮಿಸುತ್ತಿದ್ದಾರೆ. ಆವರ ಕೈ ಬಲಪಡಿಸಬೇಕಿದೆ. ಆಗಾಗಿ ಜಿಲ್ಲೆಯ ಜನ ವೆಂಕಟರಮಣೇಗೌಡ ಅವರನ್ನು ಗೆಲ್ಲಿಸುವ ಮೂಲಕ ರಾಹುಲ್‌ ಗಾಂಧಿಗೆ ಶಕ್ತಿ ತುಂಬಬೇಕು ಎಂದರು.

ಅಧಿಕಾರದಲ್ಲಿದಾಗ ಮೇಕೆದಾಟ ಯೋಜನೆಯನ್ನು ಕೀಳಾಗಿ ಕಂಡವರು ಇಂದು ಮೇಕೆದಾಟಿನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿಗೆ ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಿಲ್ಲೆಗೆ ನೂರಾರು ಕೋಟಿ ಅನುದಾನ ತಂದಿದ್ದೇವೆ. ಕೆಆರ್‌ಎಸ್‌ನ್ನು ವಿಶ್ವದರ್ಜೆಗೆ ಏರಿಸಿದ್ದೇವೆ. ನಾಲೆಗಳ ಆಧುನಿಕರಣ ಮಾಡಿದ್ದೇವೆ. ವಿಶ್ವವಿದ್ಯಾಲಯ ಘೋಷಿಸಿದ್ದೇವೆ ಎಂದು ಕಾಂಗ್ರೆಸ್‌ನ ಅಭಿವೃದ್ಧಿಯ ಬಗ್ಗೆ ವಿವರಿಸಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

1 hour ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

1 hour ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

1 hour ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

1 hour ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago