ಮಂಡ್ಯ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಮಾಡಿದ್ದೇವೆ, ಈ ಅವಧಿಯಲ್ಲೇ ಜಿಲ್ಲೆಗೆ ಶಾಶ್ವತ ಯೋಜನೆ ನೀಡಲಾಗುವುದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿಕೆ ನೀಡಿದರು.
ನಗರದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಿ ಎಂದು ಮನವಿ ಮಾಡಿದರು. ಕೇಂದ್ರದಲ್ಲಿ ಆಡಳಿತ ನಡೆಸಿದ ಮೋದಿ ಹತ್ತು ವರ್ಷ ಸುಳ್ಳನ್ನೇ ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ದೇಶವನ್ನು ಸುತ್ತಾಡಿ ದೇಶದ ಸಮಸ್ಯೆಗಳನ್ನು ಕಂಡು ಪರಿಹಾರ ನೀಡುವಲ್ಲಿ ಶ್ರಮಿಸುತ್ತಿದ್ದಾರೆ. ಆವರ ಕೈ ಬಲಪಡಿಸಬೇಕಿದೆ. ಆಗಾಗಿ ಜಿಲ್ಲೆಯ ಜನ ವೆಂಕಟರಮಣೇಗೌಡ ಅವರನ್ನು ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿಗೆ ಶಕ್ತಿ ತುಂಬಬೇಕು ಎಂದರು.
ಅಧಿಕಾರದಲ್ಲಿದಾಗ ಮೇಕೆದಾಟ ಯೋಜನೆಯನ್ನು ಕೀಳಾಗಿ ಕಂಡವರು ಇಂದು ಮೇಕೆದಾಟಿನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿಗೆ ಟೀಕಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಜಿಲ್ಲೆಗೆ ನೂರಾರು ಕೋಟಿ ಅನುದಾನ ತಂದಿದ್ದೇವೆ. ಕೆಆರ್ಎಸ್ನ್ನು ವಿಶ್ವದರ್ಜೆಗೆ ಏರಿಸಿದ್ದೇವೆ. ನಾಲೆಗಳ ಆಧುನಿಕರಣ ಮಾಡಿದ್ದೇವೆ. ವಿಶ್ವವಿದ್ಯಾಲಯ ಘೋಷಿಸಿದ್ದೇವೆ ಎಂದು ಕಾಂಗ್ರೆಸ್ನ ಅಭಿವೃದ್ಧಿಯ ಬಗ್ಗೆ ವಿವರಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…