ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ ಈ ಬಾರಿ 13 ಅಡಿಯಷ್ಟು ನೀರು ಹೆಚ್ಚಿರುವುದು ಸಮಾಧಾನಕರ ಸಂಗತಿ.
ಸದ್ಯದ ಮಟ್ಟಿಗೆ ಕುಡಿಯುವ ನೀರು ಹಾಗೂ ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಸದ್ಯದಲ್ಲೇ ಮಳೆಯಾದರೆ ರೈತರಿಗೂ ಕೆಆರ್ಎಸ್ ನೀರಿನ ಅಭಾವವು ಬೀರುವುದಿಲ್ಲ.
ಪ್ರಸ್ತುತ ನೀರಿನ ಮಟ್ಟವು 93.10 ಅಡಿ ದಾಖಲಾಗಿದ್ದು, ಜಲಾಶಯದಲ್ಲಿ 17.879 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇಷ್ಟು ಪ್ರಮಾಣದಲ್ಲಿ ನೀರು ಈಗಲೂ ಇರುವುದರಿಂದ ಸದ್ಯಕ್ಕೆ ಕಾವೇರಿ ಕುಡಿಯುವ ನೀರಿಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜತೆಗೆ, ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆ ನೀರು ಸಿಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳೆಗಳ ರಕ್ಷಣೆಗಾಗಿ 4 ಕಟ್ಟುಗಳಲ್ಲಿ ನೀರು ಹರಿಸಲು ಕೆಆರ್ಎಸ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ 4 ಕಟ್ಟುಗಳಲ್ಲಿ ನೀರನ್ನು ಹರಿಸಲಾಗಿದೆ. ಕಳೆದ ಏ.29ರಂದು ರಾತ್ರಿ ಸ್ಥಗಿತಗೊಳಿಸಲಾಗಿದ್ದ ನೀರಿನ ಹರಿವನ್ನು ಶನಿವಾರ ರಾತ್ರಿಯಿಂದಲೇ ಮತ್ತೆ ಹರಿಸಲಾಗುತ್ತಿದೆ. ಅಂದರೆ ಇದು 5ನೇ ಕಟ್ಟು ನೀರಾಗಿದೆ.
ಕೃಷಿ ಬಳಕೆಗೆ 30 ಟಿಎಂಸಿ ಅಡಿ ಲಭ್ಯವಿರುವುದರಿಂದ ರೈತರಲ್ಲಿ ಆತಂಕವಿಲ್ಲ. ಸದ್ಯದಲ್ಲೇ ವಾಡಿಕೆ ಮಳೆ ಆರಂಭವಾಗಲಿದೆ ಎಂಬ ನಿರೀಕ್ಷೆಯೂ ರೈತರಲ್ಲಿದೆ.
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್ನ…
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…