Categories: ಮಂಡ್ಯ

ಕುಸಿದ ಕೆಆರ್‌ಎಸ್‌ : ಕುಡಿಯುವ ನೀರಿಗೆ ತೊಂದರಯೇ ?

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ ಈ ಬಾರಿ 13 ಅಡಿಯಷ್ಟು ನೀರು ಹೆಚ್ಚಿರುವುದು ಸಮಾಧಾನಕರ ಸಂಗತಿ.

ಸದ್ಯದ ಮಟ್ಟಿಗೆ ಕುಡಿಯುವ ನೀರು ಹಾಗೂ ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಸದ್ಯದಲ್ಲೇ ಮಳೆಯಾದರೆ ರೈತರಿಗೂ ಕೆಆರ್‌ಎಸ್‌ ನೀರಿನ ಅಭಾವವು ಬೀರುವುದಿಲ್ಲ.

ಪ್ರಸ್ತುತ ನೀರಿನ ಮಟ್ಟವು 93.10 ಅಡಿ ದಾಖಲಾಗಿದ್ದು, ಜಲಾಶಯದಲ್ಲಿ 17.879 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇಷ್ಟು ಪ್ರಮಾಣದಲ್ಲಿ ನೀರು ಈಗಲೂ ಇರುವುದರಿಂದ ಸದ್ಯಕ್ಕೆ ಕಾವೇರಿ ಕುಡಿಯುವ ನೀರಿಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜತೆಗೆ, ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆ ನೀರು ಸಿಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳೆಗಳ ರಕ್ಷಣೆಗಾಗಿ 4 ಕಟ್ಟುಗಳಲ್ಲಿ ನೀರು ಹರಿಸಲು ಕೆಆರ್‌ಎಸ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ 4 ಕಟ್ಟುಗಳಲ್ಲಿ ನೀರನ್ನು ಹರಿಸಲಾಗಿದೆ. ಕಳೆದ ಏ.29ರಂದು ರಾತ್ರಿ ಸ್ಥಗಿತಗೊಳಿಸಲಾಗಿದ್ದ ನೀರಿನ ಹರಿವನ್ನು ಶನಿವಾರ ರಾತ್ರಿಯಿಂದಲೇ ಮತ್ತೆ ಹರಿಸಲಾಗುತ್ತಿದೆ. ಅಂದರೆ ಇದು 5ನೇ ಕಟ್ಟು ನೀರಾಗಿದೆ.

ಕೃಷಿ ಬಳಕೆಗೆ 30 ಟಿಎಂಸಿ ಅಡಿ ಲಭ್ಯವಿರುವುದರಿಂದ ರೈತರಲ್ಲಿ ಆತಂಕವಿಲ್ಲ. ಸದ್ಯದಲ್ಲೇ ವಾಡಿಕೆ ಮಳೆ ಆರಂಭವಾಗಲಿದೆ ಎಂಬ ನಿರೀಕ್ಷೆಯೂ ರೈತರಲ್ಲಿದೆ.

ಆಂದೋಲನ ಡೆಸ್ಕ್

Recent Posts

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

55 mins ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

59 mins ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

1 hour ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

2 hours ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

2 hours ago