Categories: ಮಂಡ್ಯ

ಕುಸಿದ ಕೆಆರ್‌ಎಸ್‌ : ಕುಡಿಯುವ ನೀರಿಗೆ ತೊಂದರಯೇ ?

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ ಈ ಬಾರಿ 13 ಅಡಿಯಷ್ಟು ನೀರು ಹೆಚ್ಚಿರುವುದು ಸಮಾಧಾನಕರ ಸಂಗತಿ.

ಸದ್ಯದ ಮಟ್ಟಿಗೆ ಕುಡಿಯುವ ನೀರು ಹಾಗೂ ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಸದ್ಯದಲ್ಲೇ ಮಳೆಯಾದರೆ ರೈತರಿಗೂ ಕೆಆರ್‌ಎಸ್‌ ನೀರಿನ ಅಭಾವವು ಬೀರುವುದಿಲ್ಲ.

ಪ್ರಸ್ತುತ ನೀರಿನ ಮಟ್ಟವು 93.10 ಅಡಿ ದಾಖಲಾಗಿದ್ದು, ಜಲಾಶಯದಲ್ಲಿ 17.879 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇಷ್ಟು ಪ್ರಮಾಣದಲ್ಲಿ ನೀರು ಈಗಲೂ ಇರುವುದರಿಂದ ಸದ್ಯಕ್ಕೆ ಕಾವೇರಿ ಕುಡಿಯುವ ನೀರಿಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜತೆಗೆ, ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆ ನೀರು ಸಿಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳೆಗಳ ರಕ್ಷಣೆಗಾಗಿ 4 ಕಟ್ಟುಗಳಲ್ಲಿ ನೀರು ಹರಿಸಲು ಕೆಆರ್‌ಎಸ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ 4 ಕಟ್ಟುಗಳಲ್ಲಿ ನೀರನ್ನು ಹರಿಸಲಾಗಿದೆ. ಕಳೆದ ಏ.29ರಂದು ರಾತ್ರಿ ಸ್ಥಗಿತಗೊಳಿಸಲಾಗಿದ್ದ ನೀರಿನ ಹರಿವನ್ನು ಶನಿವಾರ ರಾತ್ರಿಯಿಂದಲೇ ಮತ್ತೆ ಹರಿಸಲಾಗುತ್ತಿದೆ. ಅಂದರೆ ಇದು 5ನೇ ಕಟ್ಟು ನೀರಾಗಿದೆ.

ಕೃಷಿ ಬಳಕೆಗೆ 30 ಟಿಎಂಸಿ ಅಡಿ ಲಭ್ಯವಿರುವುದರಿಂದ ರೈತರಲ್ಲಿ ಆತಂಕವಿಲ್ಲ. ಸದ್ಯದಲ್ಲೇ ವಾಡಿಕೆ ಮಳೆ ಆರಂಭವಾಗಲಿದೆ ಎಂಬ ನಿರೀಕ್ಷೆಯೂ ರೈತರಲ್ಲಿದೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

3 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

3 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago