ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ ಈ ಬಾರಿ 13 ಅಡಿಯಷ್ಟು ನೀರು ಹೆಚ್ಚಿರುವುದು ಸಮಾಧಾನಕರ ಸಂಗತಿ.
ಸದ್ಯದ ಮಟ್ಟಿಗೆ ಕುಡಿಯುವ ನೀರು ಹಾಗೂ ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಸದ್ಯದಲ್ಲೇ ಮಳೆಯಾದರೆ ರೈತರಿಗೂ ಕೆಆರ್ಎಸ್ ನೀರಿನ ಅಭಾವವು ಬೀರುವುದಿಲ್ಲ.
ಪ್ರಸ್ತುತ ನೀರಿನ ಮಟ್ಟವು 93.10 ಅಡಿ ದಾಖಲಾಗಿದ್ದು, ಜಲಾಶಯದಲ್ಲಿ 17.879 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇಷ್ಟು ಪ್ರಮಾಣದಲ್ಲಿ ನೀರು ಈಗಲೂ ಇರುವುದರಿಂದ ಸದ್ಯಕ್ಕೆ ಕಾವೇರಿ ಕುಡಿಯುವ ನೀರಿಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜತೆಗೆ, ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನಾಲೆ ನೀರು ಸಿಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳೆಗಳ ರಕ್ಷಣೆಗಾಗಿ 4 ಕಟ್ಟುಗಳಲ್ಲಿ ನೀರು ಹರಿಸಲು ಕೆಆರ್ಎಸ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ 4 ಕಟ್ಟುಗಳಲ್ಲಿ ನೀರನ್ನು ಹರಿಸಲಾಗಿದೆ. ಕಳೆದ ಏ.29ರಂದು ರಾತ್ರಿ ಸ್ಥಗಿತಗೊಳಿಸಲಾಗಿದ್ದ ನೀರಿನ ಹರಿವನ್ನು ಶನಿವಾರ ರಾತ್ರಿಯಿಂದಲೇ ಮತ್ತೆ ಹರಿಸಲಾಗುತ್ತಿದೆ. ಅಂದರೆ ಇದು 5ನೇ ಕಟ್ಟು ನೀರಾಗಿದೆ.
ಕೃಷಿ ಬಳಕೆಗೆ 30 ಟಿಎಂಸಿ ಅಡಿ ಲಭ್ಯವಿರುವುದರಿಂದ ರೈತರಲ್ಲಿ ಆತಂಕವಿಲ್ಲ. ಸದ್ಯದಲ್ಲೇ ವಾಡಿಕೆ ಮಳೆ ಆರಂಭವಾಗಲಿದೆ ಎಂಬ ನಿರೀಕ್ಷೆಯೂ ರೈತರಲ್ಲಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…