ಮಂಡ್ಯ

ಧರ್ಮಸ್ಥಳ ಕ್ಷೇತ್ರದ ಮೇಲೆ ನಮಗೂ ಗೌರವವಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.

ಶುಕ್ರವಾರ ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಗೌರವಿಸಬೇಕು. ಧರ್ಮಸ್ಥಳದ ಧಾರ್ಮಿಕ ವಿಚಾರಕ್ಕೆ ಬಂದರೆ ವಿರೋಧ ಪಕ್ಷಗಳಿಗಿಂತ ಹೆಚ್ಚು ನಂಬಿಕೆ ನಮಗಿದೆ ಹಾಗೂ ಕಾನೂನಿನ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ, ನಮ್ಮ ಸರ್ಕಾರಕ್ಕೆ ಧರ್ಮಸ್ಥಳ ಹಾಗೂ ಅಲ್ಲಿನ ಮಾಲೀಕರ ಬಗ್ಗೆ ಯಾವುದೇ ಅಸಮಧಾನ ಇಲ್ಲ ಎಂದು ಹೇಳಿದರು.

ಬಿಜೆಪಿ ಪಕ್ಷದ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಅವರಿಗೆ ಯಾವುದೇ ಗಂಭೀರ ಪ್ರಕರಣ ‌ಸಿಕ್ಕಿಲ್ಲ ಹಾಗಾಗಿ ರಾಜಣ್ಣ ವಿಚಾರ ತೆಗೆದುಕೊಂಡಿದ್ದಾರೆ. ರಾಜಣ್ಣ ಅವರನ್ನು ಯಾಕೆ ಕೈ ಬಿಟ್ಟಿದ್ದಾರೆ ಎಂದು ನಮ್ಮ ಪಕ್ಷಕ್ಕೆ ಗೊತ್ತಿದೆ. ರಾಜಣ್ಣ ನಾವು ಎಲ್ಲರೂ ಚನ್ನಾಗಿ ಇದ್ದೇವೆ. ಮೊದಲು ಬಿಜೆಪಿಯ ತನ್ನ ಒಳ ಜಗಳ ಸರಿ ಪಡಿಸಿಕೊಳ್ಳಲಿ. ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರನ್ನು ಬದಲಾವಣೆ ಮಾಡಲು ಸಾಧ್ಯವಾಗುತ್ತಿಲ್ಲ ಮೊದಲು ಅವರು ಅದನ್ನು ಸರಿ ಪಡಿಸಿಕೊಳ್ಳಲಿ ಎಂದು ಹೇಳಿದರು.

ರಾಜಣ್ಣ ಅವರ ಸಚಿವ ಸ್ಥಾನ ಯಾರಿಗೆ ಕೊಡುತ್ತಾರೆ ಎಂದು ತಿಳಿದಿಲ್ಲ ಅದು ಹೈಕಮಾಂಡ್ ತೀರ್ಮಾನ. ಆದರೆ ಅದು ಮಂಡ್ಯಗೆ ಸಿಗಲಿ ಎಂಬ ಆಸೆ ಇದೆ. ಎಂ.ಪಿ. ನರೇಂದ್ರಸ್ವಾಮಿ ಅವರು ಸಚಿವ ಸ್ಥಾನ ನೀಡಿ ಎಂದು ನಾವು ಕೇಳಿದ್ದೇವೆ. ನರೇಂದ್ರಸ್ವಾಮಿ ಸಚಿವರಾಗಬೇಕೆಂಬ ಆಸೆ ಇದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ರಸಗೊಬ್ಬರ ಕಡಿಮೆ‌ ಸರಬರಾಜು ಆಗಿರೋದು ಸತ್ಯ. ನಿನ್ನೆ ಶಿವರಾಜ್‌ಕುಮಾರ್ ಚೌಹಾಣ್ ರವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದ ಎಲ್ಲಾ ಸಚಿವರು ಭಾಗಿಯಾಗಿದ್ದೇವು, ದೇಶದ ಎಲ್ಲಾ ರಾಜ್ಯಗಳಿಗೂ‌ ಗೊಬ್ಬರ ಕಡಿಮೆ ಸರಬರಾಜು ಆಗಿದೆ. ಇದಕ್ಕೆ ನೇರ ಕಾರಣ ಕೇಂದ್ರ ಸರ್ಕಾರ. ನಮಗೆ ಕಡಿಮೆ ರಸಗೊಬ್ಬರ ಸರಬರಾಜು ಆಗಿದ್ದರು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಗೋಲಿಬಾರ್ ಆಗಿದೆ. ಅವರು ಇದನ್ನು ರಾಜಕೀಯವಾಗಿ ಬಳಕೆ ಮಾಡ್ತಾ ಇದ್ದಾರೆ. ಮುಂಗಾರು ಬೇಗ ಆರಂಭವಾಗಿರುವ ಕಾರಣ ರೈತರು ಗೊಬ್ಬರಕ್ಕೆ ಮುಗಿಬಿದ್ದಿದ್ದಾರೆ. ಕೇಂದ್ರಕ್ಕೆ ಹೀಗಾಗಲೇ ರಾಜ್ಯದ ಪರಿಸ್ಥಿತಿಯ ಕುರಿತು ನಾವು ಮನವರಿಕೆ ಮಾಡಿದ್ದೇವೆ ಎಂದರು.

ರೈತರು ಯೂರಿಯಾವನ್ನು ಹೆಚ್ಚು ಬಳಕೆ ಮಾಡುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಬೆಳೆಯ ಗುಣಮಟ್ಟ ಕುಂದುತ್ತದೆ ಆದ್ದರಿಂದ ರೈತರು ನ್ಯಾನೋ ಯೂರಿಯಾವನ್ನು ಬಳಕೆ ಮಾಡಿ ಬೆಳೆಯೂ ಉತ್ತಮವಾಗುತ್ತದೆ ಜೊತೆಗೆ ಯೂರಿಯಾ ಸಮಸ್ಯೆಯು ಸಹ ಉದ್ಭವಿಸುವುದಿಲ್ಲ ಎಂದರು.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ದರ್ಶನ್ ವಿಚಾರದಲ್ಲೂ ಎನೂ ಮಾಡಲು ಸಾಧ್ಯವಿಲ್ಲ ಎಂದು ಜನರು ನಂಬಿದ್ದರು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಭಾಗಲೆ ಬೇಕು. ದರ್ಶನ್ ವಿಚಾರದಲ್ಲಿ ಕೊಲೆ ಆಗಿದ್ಯೋ ಇಲ್ಲವೊ ಕೋರ್ಟ್ ತೀರ್ಮಾನ ಮಾಡುತ್ತೆ. ಸುಪ್ರೀಂ ಕೋರ್ಟ್ ದರ್ಶನ್ ರವರ ಬೇಲ್ ರದ್ದು ಗೊಳಿಸಿದೆ ಈ ಮೂಲಕ ನ್ಯಾಯಾಲಯ ಸೂಕ್ತ ತೀರ್ಪು ನೀಡುತ್ತದೆ ಎಂಬ ಭರವಸೆ ಉಳಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾ ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಮೈ ಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

18 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

48 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago