ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಸಿಎ ಮತ್ತು ಆರ್ಸಿಬಿ ಅವರು ಸಿಎಂ ಬಳಿ ವಿಧಾನಸೌಧದ ಎದುರು ವಿಜಯೋತ್ಸವ ಮಾಡುವಂತೆ ಕೇಳಿಕೊಂಡಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅದಕ್ಕೆ ಒಪ್ಪಿ ಕಾರ್ಯಕ್ರಮ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡೋಕೆ ಏನೂ ಕೆಲಸ ಇಲ್ಲ. ಹಾಗಾಗಿ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.
ಡಾ. ರಾಜಕುಮಾರ್ ಅವರು ಮೃತಪಟ್ಟಾಗ ಯಾರೂ ಗಲಾಟೆ ಮಾಡ್ತಿರಲಿಲ್ಲ. ನನ್ನ ಕಣ್ಣ ಮುಂದೆ ಗುಂಡು ಹೊಡೆದರು. ಅಂದು ನನ್ನ ಕಣ್ಣಲ್ಲಿ ೪ ಹೆಣ ನೋಡಿದ್ದೀನಿ. ಬಿಜೆಪಿಯವರು ಸುಮ್ಮನೆ ಇದರ ಬಗ್ಗೆ ಮಾತನಾಡಬಾರದು. ಅವತ್ತು ವೈಫಲ್ಯ ಆಗಿರಲಿಲ್ವಾ ? ಯಾಕೆ ಅಭಿಮಾನಿಗಳಿಗೆ ಗುಂಡು ಹೊಡೆದರು? ಅವತ್ತು ಎಚ್ಡಿಕೆಗೆ ನೆನಪಿರಲಿಲ್ವಾ ಸೆಕ್ಯೂರಿಟಿ ಕೊಡಬೇಕು ಅಂತ ಎಂದು ಪ್ರಶ್ನಿಸಿದರು.
ಸಾವಿನ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯವರ ಹುಟ್ಟುಗುಣ ಎಂದು ಛೇಡಿಸಿದರು. ನಾನು ಸಚಿವಕಾಂಕ್ಷಿಯಲ್ಲ ಸಂಪುಟ ಪುನರ್ ರಚನೆ ಊಹಾಪೋಹ. ಯಾವುದೇ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಮಂತ್ರಿಗಿರಿ ಆಕಾಂಕ್ಷಿ ಅಲ್ಲ. ಮೊದಲ ಬಾರಿಗೆ ಶಾಸಕ ಆಗಿದ್ದೀನಿ, ಒಳ್ಳೆಯ ಕೆಲಸ ಮಾಡ್ತೀನಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಬದಲಾವಣೆ ವಿಚಾರ ನಮ್ಮ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಎಲ್ಲವೂ ಊಹಾಪೋಹ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…