ಮಂಡ್ಯ

ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಮಾಡಿಲ್ಲ : ಶಾಸಕ ರವಿಕುಮಾರ್‌

ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಸಿಎ ಮತ್ತು ಆರ್‌ಸಿಬಿ ಅವರು ಸಿಎಂ ಬಳಿ ವಿಧಾನಸೌಧದ ಎದುರು ವಿಜಯೋತ್ಸವ ಮಾಡುವಂತೆ ಕೇಳಿಕೊಂಡಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅದಕ್ಕೆ ಒಪ್ಪಿ ಕಾರ್ಯಕ್ರಮ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡೋಕೆ ಏನೂ ಕೆಲಸ ಇಲ್ಲ. ಹಾಗಾಗಿ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.

ಡಾ. ರಾಜಕುಮಾರ್ ಅವರು ಮೃತಪಟ್ಟಾಗ ಯಾರೂ ಗಲಾಟೆ ಮಾಡ್ತಿರಲಿಲ್ಲ. ನನ್ನ ಕಣ್ಣ ಮುಂದೆ ಗುಂಡು ಹೊಡೆದರು. ಅಂದು ನನ್ನ ಕಣ್ಣಲ್ಲಿ ೪ ಹೆಣ ನೋಡಿದ್ದೀನಿ. ಬಿಜೆಪಿಯವರು ಸುಮ್ಮನೆ ಇದರ ಬಗ್ಗೆ ಮಾತನಾಡಬಾರದು. ಅವತ್ತು ವೈಫಲ್ಯ ಆಗಿರಲಿಲ್ವಾ ? ಯಾಕೆ ಅಭಿಮಾನಿಗಳಿಗೆ ಗುಂಡು ಹೊಡೆದರು? ಅವತ್ತು ಎಚ್‌ಡಿಕೆಗೆ ನೆನಪಿರಲಿಲ್ವಾ ಸೆಕ್ಯೂರಿಟಿ ಕೊಡಬೇಕು ಅಂತ ಎಂದು ಪ್ರಶ್ನಿಸಿದರು.

ಸಾವಿನ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯವರ ಹುಟ್ಟುಗುಣ ಎಂದು ಛೇಡಿಸಿದರು. ನಾನು ಸಚಿವಕಾಂಕ್ಷಿಯಲ್ಲ ಸಂಪುಟ ಪುನರ್ ರಚನೆ ಊಹಾಪೋಹ. ಯಾವುದೇ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಮಂತ್ರಿಗಿರಿ ಆಕಾಂಕ್ಷಿ ಅಲ್ಲ. ಮೊದಲ ಬಾರಿಗೆ ಶಾಸಕ ಆಗಿದ್ದೀನಿ, ಒಳ್ಳೆಯ ಕೆಲಸ ಮಾಡ್ತೀನಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಬದಲಾವಣೆ ವಿಚಾರ ನಮ್ಮ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಎಲ್ಲವೂ ಊಹಾಪೋಹ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago