ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಸಿಎ ಮತ್ತು ಆರ್ಸಿಬಿ ಅವರು ಸಿಎಂ ಬಳಿ ವಿಧಾನಸೌಧದ ಎದುರು ವಿಜಯೋತ್ಸವ ಮಾಡುವಂತೆ ಕೇಳಿಕೊಂಡಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅದಕ್ಕೆ ಒಪ್ಪಿ ಕಾರ್ಯಕ್ರಮ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡೋಕೆ ಏನೂ ಕೆಲಸ ಇಲ್ಲ. ಹಾಗಾಗಿ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.
ಡಾ. ರಾಜಕುಮಾರ್ ಅವರು ಮೃತಪಟ್ಟಾಗ ಯಾರೂ ಗಲಾಟೆ ಮಾಡ್ತಿರಲಿಲ್ಲ. ನನ್ನ ಕಣ್ಣ ಮುಂದೆ ಗುಂಡು ಹೊಡೆದರು. ಅಂದು ನನ್ನ ಕಣ್ಣಲ್ಲಿ ೪ ಹೆಣ ನೋಡಿದ್ದೀನಿ. ಬಿಜೆಪಿಯವರು ಸುಮ್ಮನೆ ಇದರ ಬಗ್ಗೆ ಮಾತನಾಡಬಾರದು. ಅವತ್ತು ವೈಫಲ್ಯ ಆಗಿರಲಿಲ್ವಾ ? ಯಾಕೆ ಅಭಿಮಾನಿಗಳಿಗೆ ಗುಂಡು ಹೊಡೆದರು? ಅವತ್ತು ಎಚ್ಡಿಕೆಗೆ ನೆನಪಿರಲಿಲ್ವಾ ಸೆಕ್ಯೂರಿಟಿ ಕೊಡಬೇಕು ಅಂತ ಎಂದು ಪ್ರಶ್ನಿಸಿದರು.
ಸಾವಿನ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯವರ ಹುಟ್ಟುಗುಣ ಎಂದು ಛೇಡಿಸಿದರು. ನಾನು ಸಚಿವಕಾಂಕ್ಷಿಯಲ್ಲ ಸಂಪುಟ ಪುನರ್ ರಚನೆ ಊಹಾಪೋಹ. ಯಾವುದೇ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಮಂತ್ರಿಗಿರಿ ಆಕಾಂಕ್ಷಿ ಅಲ್ಲ. ಮೊದಲ ಬಾರಿಗೆ ಶಾಸಕ ಆಗಿದ್ದೀನಿ, ಒಳ್ಳೆಯ ಕೆಲಸ ಮಾಡ್ತೀನಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಬದಲಾವಣೆ ವಿಚಾರ ನಮ್ಮ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಎಲ್ಲವೂ ಊಹಾಪೋಹ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…