ಮಂಡ್ಯ

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು? : ಸಚಿವ ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು. ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.

ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದರು, ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.

lokesh

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

25 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

50 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago