ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು. ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.
ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದರು, ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…