ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು. ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.
ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದರು, ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…
ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…