ಮಂಡ್ಯ

ಎರಡು ವರ್ಷ ಎಲ್ಲಿದ್ಯಪ್ಪ ರಾಹುಲ್ ಗಾಂಧಿ: ಅಶೋಕ್ ವ್ಯಂಗ್ಯ

ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸವಾಲು ಹಾಕಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ ಅವಧಿಯಲ್ಲಿ 2,000 ರೈತರ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್‌ನಿಂದ ಸಾವುಗಳಾದವು. ಇದೆಲ್ಲದರ ಜೊತೆಗೆ ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಾಯಕ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು, ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್‌ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago