r ashok
ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ ಅವಧಿಯಲ್ಲಿ 2,000 ರೈತರ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್ನಿಂದ ಸಾವುಗಳಾದವು. ಇದೆಲ್ಲದರ ಜೊತೆಗೆ ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಾಯಕ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು, ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…