ಮಂಡ್ಯ

ಮಂಡ್ಯ ಜಿಲ್ಲೆಯ ಸಪ್ತ ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?

ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್‌ಪೇಟೆ ಕ್ಷೇತ್ರಗಳು ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ. ಈ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ವಿವರ ಇಲ್ಲಿದೆ.

ಮಳವಳ್ಳಿ  -ಕೆ ಅನ್ನದಾನಿ -ಜೆಡಿಎಸ್‌- ಮುನ್ನಡೆ
ಮದ್ದೂರು- ಡಿಸಿ ತಮ್ಮಣ್ಣ -ಜೆಡಿಎಸ್‌ -ಮುನ್ನಡೆ
ಮೇಲುಕೋಟೆ -ದರ್ಶನ್‌ -ಪುಟ್ಟಣ್ಣಯ್ಯ- ಸರ್ವೋದಯ ಪಕ್ಷ -ಮುನ್ನಡೆ
ಮಂಡ್ಯ- ರವಿಕುಮಾರ್‌- ಗಾಣಿಗ- ಕಾಂಗ್ರೆಸ್‌- ಮುನ್ನಡೆ
ಶ್ರೀರಂಗಪಟ್ಟಣ- ರವೀಂದ್ರ ಶ್ರೀಕಂಠಯ್ಯ- ಜೆಡಿಎಸ್‌- ಮುನ್ನಡೆ
ನಾಗಮಂಗಲ- ಸುರೇಶ್‌- ಗೌಡ- ಜೆಡಿಎಸ್‌- ಮುನ್ನಡೆ
ಕೆಆರ್‌ ಪೇಟೆ- ಎಚ್‌ಟಿ ಮಂಜು- ಜೆಡಿಎಸ್‌- ಮುನ್ನಡೆ

ಈ ಬಾರಿಯ ಚುನಾವಣೆಯಲ್ಲಿ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣ, ಕೆಆರ್‌ ಪೇಟೆ ಕ್ಷೇತ್ರಗಳು ಇಡೀ ರಾಜ್ಯದಲ್ಲೇ ಗಮನ ಸೆಳೆದಿವೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಮಂಡ್ಯ ಚುನಾವಣೆ ಕಣ ಗಮನ ಸೆಳೆದಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯಲ್ಲಿ ಸಚಿವ ಕೆಸಿ ನಾರಾಯಣಗೌಡ, ಮಾಜಿ ಸಚಿವ ಸಿಎಸ್‌ ಪುಟ್ಟರಾಜು, ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣ್ಣಯ್ಯ, ನಿತ್ಯ ಸಚಿವ ಕೆ.ವಿ.ಶಂಕರಗೌಡರ ಮೊಮ್ಮಗ ಕೆಎಸ್‌ ವಿಜಯಾನಂದ, ಡಾ ಕೆ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಅಶೋಕ್‌ ಜಯರಾಂ, ಎಸ್‌ ಸಚ್ಚಿದಾನಂದ ಕಣದಲ್ಲಿದ್ದಾರೆ.

ಮತದಾನದ ಪ್ರಮಾಣ : ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತಗಳು ಸೇರಿ ಶೇ.85.15ರಷ್ಟು ಮತದಾನವಾಗಿದೆ. 15,33,831 ಮತದಾರರಲ್ಲಿ 13,06,053 ಮಂದಿ (ಶೇ.85.15) ಮತ ಚಲಾಯಿಸಿದ್ದಾರೆ. ಇವರಲ್ಲಿ 12,95,319 ಮಂದಿ ವಿದ್ಯುನ್ಮಾನ ಮತಯಂತ್ರದ ಮೂಲಕ 12,95,319 ಮತದಾರರು ಹಾಗೂ 10,734 ಮಂದಿ ಅಂಚೆ ಮತದಾರರು ಮತದಾನ ಮಾಡಿದ್ದಾರೆ.

lokesh

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

6 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

7 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

9 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

9 hours ago