ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್ಪೇಟೆ ಕ್ಷೇತ್ರಗಳು ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ. ಈ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ವಿವರ ಇಲ್ಲಿದೆ.
ಮಳವಳ್ಳಿ -ಕೆ ಅನ್ನದಾನಿ -ಜೆಡಿಎಸ್- ಮುನ್ನಡೆ
ಮದ್ದೂರು- ಡಿಸಿ ತಮ್ಮಣ್ಣ -ಜೆಡಿಎಸ್ -ಮುನ್ನಡೆ
ಮೇಲುಕೋಟೆ -ದರ್ಶನ್ -ಪುಟ್ಟಣ್ಣಯ್ಯ- ಸರ್ವೋದಯ ಪಕ್ಷ -ಮುನ್ನಡೆ
ಮಂಡ್ಯ- ರವಿಕುಮಾರ್- ಗಾಣಿಗ- ಕಾಂಗ್ರೆಸ್- ಮುನ್ನಡೆ
ಶ್ರೀರಂಗಪಟ್ಟಣ- ರವೀಂದ್ರ ಶ್ರೀಕಂಠಯ್ಯ- ಜೆಡಿಎಸ್- ಮುನ್ನಡೆ
ನಾಗಮಂಗಲ- ಸುರೇಶ್- ಗೌಡ- ಜೆಡಿಎಸ್- ಮುನ್ನಡೆ
ಕೆಆರ್ ಪೇಟೆ- ಎಚ್ಟಿ ಮಂಜು- ಜೆಡಿಎಸ್- ಮುನ್ನಡೆ
ಈ ಬಾರಿಯ ಚುನಾವಣೆಯಲ್ಲಿ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣ, ಕೆಆರ್ ಪೇಟೆ ಕ್ಷೇತ್ರಗಳು ಇಡೀ ರಾಜ್ಯದಲ್ಲೇ ಗಮನ ಸೆಳೆದಿವೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಮಂಡ್ಯ ಚುನಾವಣೆ ಕಣ ಗಮನ ಸೆಳೆದಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯಲ್ಲಿ ಸಚಿವ ಕೆಸಿ ನಾರಾಯಣಗೌಡ, ಮಾಜಿ ಸಚಿವ ಸಿಎಸ್ ಪುಟ್ಟರಾಜು, ಸರ್ವೋದಯ ಪಕ್ಷದ ದರ್ಶನ್ ಪುಟ್ಟಣ್ಣಯ್ಯ, ನಿತ್ಯ ಸಚಿವ ಕೆ.ವಿ.ಶಂಕರಗೌಡರ ಮೊಮ್ಮಗ ಕೆಎಸ್ ವಿಜಯಾನಂದ, ಡಾ ಕೆ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಅಶೋಕ್ ಜಯರಾಂ, ಎಸ್ ಸಚ್ಚಿದಾನಂದ ಕಣದಲ್ಲಿದ್ದಾರೆ.
ಮತದಾನದ ಪ್ರಮಾಣ : ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತಗಳು ಸೇರಿ ಶೇ.85.15ರಷ್ಟು ಮತದಾನವಾಗಿದೆ. 15,33,831 ಮತದಾರರಲ್ಲಿ 13,06,053 ಮಂದಿ (ಶೇ.85.15) ಮತ ಚಲಾಯಿಸಿದ್ದಾರೆ. ಇವರಲ್ಲಿ 12,95,319 ಮಂದಿ ವಿದ್ಯುನ್ಮಾನ ಮತಯಂತ್ರದ ಮೂಲಕ 12,95,319 ಮತದಾರರು ಹಾಗೂ 10,734 ಮಂದಿ ಅಂಚೆ ಮತದಾರರು ಮತದಾನ ಮಾಡಿದ್ದಾರೆ.
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…