ಮಂಡ್ಯ

ಮಂಡ್ಯ ಜಿಲ್ಲೆಯ ಸಪ್ತ ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ?

ಮಂಡ್ಯ : ಮಂಡ್ಯ ರಾಜಕೀಯ ಅಂದ್ರೇ ಇಂಡಿಯಾನೇ ತಿರುಗಿ ನೋಡುತ್ತೆ ಎಂಬ ಮಾತಿದೆ. ರಾಜಕೀಯ ಪ್ರಜ್ಞಾವಂತಿಕೆಯಿಂದ ಗಮನ ಸೆಳೆದಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಒಟ್ಟು 7 ಕ್ಷೇತ್ರಗಳಿವೆ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆಆರ್‌ಪೇಟೆ ಕ್ಷೇತ್ರಗಳು ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ. ಈ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ವಿವರ ಇಲ್ಲಿದೆ.

ಮಳವಳ್ಳಿ  -ಕೆ ಅನ್ನದಾನಿ -ಜೆಡಿಎಸ್‌- ಮುನ್ನಡೆ
ಮದ್ದೂರು- ಡಿಸಿ ತಮ್ಮಣ್ಣ -ಜೆಡಿಎಸ್‌ -ಮುನ್ನಡೆ
ಮೇಲುಕೋಟೆ -ದರ್ಶನ್‌ -ಪುಟ್ಟಣ್ಣಯ್ಯ- ಸರ್ವೋದಯ ಪಕ್ಷ -ಮುನ್ನಡೆ
ಮಂಡ್ಯ- ರವಿಕುಮಾರ್‌- ಗಾಣಿಗ- ಕಾಂಗ್ರೆಸ್‌- ಮುನ್ನಡೆ
ಶ್ರೀರಂಗಪಟ್ಟಣ- ರವೀಂದ್ರ ಶ್ರೀಕಂಠಯ್ಯ- ಜೆಡಿಎಸ್‌- ಮುನ್ನಡೆ
ನಾಗಮಂಗಲ- ಸುರೇಶ್‌- ಗೌಡ- ಜೆಡಿಎಸ್‌- ಮುನ್ನಡೆ
ಕೆಆರ್‌ ಪೇಟೆ- ಎಚ್‌ಟಿ ಮಂಜು- ಜೆಡಿಎಸ್‌- ಮುನ್ನಡೆ

ಈ ಬಾರಿಯ ಚುನಾವಣೆಯಲ್ಲಿ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣ, ಕೆಆರ್‌ ಪೇಟೆ ಕ್ಷೇತ್ರಗಳು ಇಡೀ ರಾಜ್ಯದಲ್ಲೇ ಗಮನ ಸೆಳೆದಿವೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಮಂಡ್ಯ ಚುನಾವಣೆ ಕಣ ಗಮನ ಸೆಳೆದಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯಲ್ಲಿ ಸಚಿವ ಕೆಸಿ ನಾರಾಯಣಗೌಡ, ಮಾಜಿ ಸಚಿವ ಸಿಎಸ್‌ ಪುಟ್ಟರಾಜು, ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣ್ಣಯ್ಯ, ನಿತ್ಯ ಸಚಿವ ಕೆ.ವಿ.ಶಂಕರಗೌಡರ ಮೊಮ್ಮಗ ಕೆಎಸ್‌ ವಿಜಯಾನಂದ, ಡಾ ಕೆ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಅಶೋಕ್‌ ಜಯರಾಂ, ಎಸ್‌ ಸಚ್ಚಿದಾನಂದ ಕಣದಲ್ಲಿದ್ದಾರೆ.

ಮತದಾನದ ಪ್ರಮಾಣ : ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತಗಳು ಸೇರಿ ಶೇ.85.15ರಷ್ಟು ಮತದಾನವಾಗಿದೆ. 15,33,831 ಮತದಾರರಲ್ಲಿ 13,06,053 ಮಂದಿ (ಶೇ.85.15) ಮತ ಚಲಾಯಿಸಿದ್ದಾರೆ. ಇವರಲ್ಲಿ 12,95,319 ಮಂದಿ ವಿದ್ಯುನ್ಮಾನ ಮತಯಂತ್ರದ ಮೂಲಕ 12,95,319 ಮತದಾರರು ಹಾಗೂ 10,734 ಮಂದಿ ಅಂಚೆ ಮತದಾರರು ಮತದಾನ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago