ಮಂಡ್ಯ

ಕಾವೇರಿ ಆರತಿಗೆ ವಿರೋಧ ಏಕೆ : ಶಾಸಕ ರವಿಕುಮಾರ್‌

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನಗೊಂಡರೆ ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಇದರ ಅನುಕೂಲ ರೈತರು ಹಾಗೂ ರೈತರ ಮಕ್ಕಳಿಗೆ ಆಗುತ್ತದೆ. ವಿರೋಧ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ದೊಡ್ಡ ಹಳ್ಳಿ ಮಂಡ್ಯ ಅಭಿವೃದ್ಧಿ ಆಗಬೇಕು: ಮಂಡ್ಯ ದೊಡ್ಡ ಹಳ್ಳಿ ರೀತಿ ಇದೆ. ಅಭಿವೃದ್ಧಿ ಆಗಬೇಕು ಎಂದರೆ ಮಂಡ್ಯಕ್ಕೆ ಜನರು ಬರಬೇಕು. ಈ ಎರಡು ಯೋಜನೆಗಳಿಂದ ಕೆಆರ್‌ಎಸ್‌ಗೆ ಯಾವುದೇ ಧಕ್ಕೆ ಆಗದು. ಜನರು ಬಂದರೆ ಡ್ಯಾಂ ಕಲ್ಲಿಗೆ ಗುದಿಯುತ್ತಾರಾ? ಕಾವೇರಿ ಆರತಿಯನ್ನು ನಮ್ಮ ಸರ್ಕಾರ ಮಾಡೇ ಮಾಡುತ್ತೆ. ರೈತರ ವಿರೋಧದ ಹಿಂದೆ ಯಾವ ಷಡ್ಯಂತ್ರ ಇದೆಯೋ ಗೊತ್ತಿಲ್ಲ. 20 ರೂಪಾಯಿ ಕರ್ಪೂರ ಹಚ್ಚೋಕೆ ಯಾಕೆ 100 ಕೋಟಿ ರೂ.ಎಂಬ ರೈತ ಸಂಘದ ಮುಖಂಡರಿಗೆ ಶಾಸಕರು ಟಾಂಗ್ ನೀಡಿದರು.

ಯೋಜನೆ ಜಾರಿಯಾಗುವ ಮುನ್ನ ಅದ್ಯಾಕೆ,ಇದ್ಯಾಕೆ ಅನ್ನೊದ್ಯಾಕೆ?
ಕರ್ಪೂರ ಹಚ್ಚೋಕೆ 20 ರೂ. ಸಾಕು, ಆದರೆ ಆರತಿ ಮಾಡಲು ಇನ್ಫಸ್ಟ್ರಕ್ಚರ್ ಬೇಕಲ್ಲ. 20 ಸಾವಿರ ಜನರು ಕುಳಿತು ನೋಡಲು ಬೇಕಲ್ಲ, ಯೋಜನೆಗೆ ಡಿಪಿಆರ್ ಆಗಲಿದೆ, ನೂರು ಕೋಟಿ ರೂ.ಡ್ರಾ ಮಾಡ್ಕೊಂಡು ಬರೋಕೆ ಆಗಲ್ಲ. ವಿರೋಧ ಮಾಡುವವರು ಡಿಪಿಆರ್ ತರಿಸಿಕೊಂಡು ನೋಡಿ. ಯಾವುದಕ್ಕೆ ಎಷ್ಟೆಷ್ಟು ಖರ್ಚು ಆಗುತ್ತೆ ಎಂದು ಪರಿಶೀಲಿಸಿ. ಭ್ರಷ್ಟಾಚಾರ ಕಂಡರೆ ಕೇಸ್ ಹಾಕಿ ಜೈಲಿಗೆ ಕಳುಹಿಸಿ. ಅದು ಬಿಟ್ಟು ಮಾಡುವ ಮುನ್ನವೇ ಅದ್ಯಾಕೆ, ಇದ್ಯಾಕೆ ಅನ್ನೋದು ಸರಿಯಲ್ಲ ಎಂದರು.

100 ಕೋಟಿ ರೂ.ಕೊಡ್ತಿರೋದು 100ರಷ್ಟು ಸತ್ಯ ;
ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾವೇರಿ ಆರತಿ ಮಾಡೇ ಮಾಡ್ತೀವಿ. ಅವರ ರೀತಿ 8 ಸಾವಿರ ಕೋಟಿ ರೂ.ಅಲ್ಲ, ಮುಖ್ಯಮಂತ್ರಿ ಆಗಿದ್ದಾಗ 8 ಸಾವಿರ ಕೋಟಿ ರೂ.ಕೊಟ್ಟೆ. ಇಳಿದಮೇಲೆ ಹೊರಟೋಯ್ತೂ ಅನ್ನೋದಲ್ಲ. 100 ಕೋಟಿ ರೂ.ಕೊಡ್ತಿರೋದು 100ಕ್ಕೆ 100 ಸತ್ಯ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

26 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

31 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

50 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

1 hour ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

2 hours ago