ಮಂಡ್ಯ

ಕಾವೇರಿ ಆರತಿಗೆ ವಿರೋಧ ಏಕೆ : ಶಾಸಕ ರವಿಕುಮಾರ್‌

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನಗೊಂಡರೆ ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಇದರ ಅನುಕೂಲ ರೈತರು ಹಾಗೂ ರೈತರ ಮಕ್ಕಳಿಗೆ ಆಗುತ್ತದೆ. ವಿರೋಧ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ದೊಡ್ಡ ಹಳ್ಳಿ ಮಂಡ್ಯ ಅಭಿವೃದ್ಧಿ ಆಗಬೇಕು: ಮಂಡ್ಯ ದೊಡ್ಡ ಹಳ್ಳಿ ರೀತಿ ಇದೆ. ಅಭಿವೃದ್ಧಿ ಆಗಬೇಕು ಎಂದರೆ ಮಂಡ್ಯಕ್ಕೆ ಜನರು ಬರಬೇಕು. ಈ ಎರಡು ಯೋಜನೆಗಳಿಂದ ಕೆಆರ್‌ಎಸ್‌ಗೆ ಯಾವುದೇ ಧಕ್ಕೆ ಆಗದು. ಜನರು ಬಂದರೆ ಡ್ಯಾಂ ಕಲ್ಲಿಗೆ ಗುದಿಯುತ್ತಾರಾ? ಕಾವೇರಿ ಆರತಿಯನ್ನು ನಮ್ಮ ಸರ್ಕಾರ ಮಾಡೇ ಮಾಡುತ್ತೆ. ರೈತರ ವಿರೋಧದ ಹಿಂದೆ ಯಾವ ಷಡ್ಯಂತ್ರ ಇದೆಯೋ ಗೊತ್ತಿಲ್ಲ. 20 ರೂಪಾಯಿ ಕರ್ಪೂರ ಹಚ್ಚೋಕೆ ಯಾಕೆ 100 ಕೋಟಿ ರೂ.ಎಂಬ ರೈತ ಸಂಘದ ಮುಖಂಡರಿಗೆ ಶಾಸಕರು ಟಾಂಗ್ ನೀಡಿದರು.

ಯೋಜನೆ ಜಾರಿಯಾಗುವ ಮುನ್ನ ಅದ್ಯಾಕೆ,ಇದ್ಯಾಕೆ ಅನ್ನೊದ್ಯಾಕೆ?
ಕರ್ಪೂರ ಹಚ್ಚೋಕೆ 20 ರೂ. ಸಾಕು, ಆದರೆ ಆರತಿ ಮಾಡಲು ಇನ್ಫಸ್ಟ್ರಕ್ಚರ್ ಬೇಕಲ್ಲ. 20 ಸಾವಿರ ಜನರು ಕುಳಿತು ನೋಡಲು ಬೇಕಲ್ಲ, ಯೋಜನೆಗೆ ಡಿಪಿಆರ್ ಆಗಲಿದೆ, ನೂರು ಕೋಟಿ ರೂ.ಡ್ರಾ ಮಾಡ್ಕೊಂಡು ಬರೋಕೆ ಆಗಲ್ಲ. ವಿರೋಧ ಮಾಡುವವರು ಡಿಪಿಆರ್ ತರಿಸಿಕೊಂಡು ನೋಡಿ. ಯಾವುದಕ್ಕೆ ಎಷ್ಟೆಷ್ಟು ಖರ್ಚು ಆಗುತ್ತೆ ಎಂದು ಪರಿಶೀಲಿಸಿ. ಭ್ರಷ್ಟಾಚಾರ ಕಂಡರೆ ಕೇಸ್ ಹಾಕಿ ಜೈಲಿಗೆ ಕಳುಹಿಸಿ. ಅದು ಬಿಟ್ಟು ಮಾಡುವ ಮುನ್ನವೇ ಅದ್ಯಾಕೆ, ಇದ್ಯಾಕೆ ಅನ್ನೋದು ಸರಿಯಲ್ಲ ಎಂದರು.

100 ಕೋಟಿ ರೂ.ಕೊಡ್ತಿರೋದು 100ರಷ್ಟು ಸತ್ಯ ;
ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾವೇರಿ ಆರತಿ ಮಾಡೇ ಮಾಡ್ತೀವಿ. ಅವರ ರೀತಿ 8 ಸಾವಿರ ಕೋಟಿ ರೂ.ಅಲ್ಲ, ಮುಖ್ಯಮಂತ್ರಿ ಆಗಿದ್ದಾಗ 8 ಸಾವಿರ ಕೋಟಿ ರೂ.ಕೊಟ್ಟೆ. ಇಳಿದಮೇಲೆ ಹೊರಟೋಯ್ತೂ ಅನ್ನೋದಲ್ಲ. 100 ಕೋಟಿ ರೂ.ಕೊಡ್ತಿರೋದು 100ಕ್ಕೆ 100 ಸತ್ಯ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

4 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

18 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

30 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

41 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

53 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

1 hour ago