ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನಗೊಂಡರೆ ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಇದರ ಅನುಕೂಲ ರೈತರು ಹಾಗೂ ರೈತರ ಮಕ್ಕಳಿಗೆ ಆಗುತ್ತದೆ. ವಿರೋಧ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ದೊಡ್ಡ ಹಳ್ಳಿ ಮಂಡ್ಯ ಅಭಿವೃದ್ಧಿ ಆಗಬೇಕು: ಮಂಡ್ಯ ದೊಡ್ಡ ಹಳ್ಳಿ ರೀತಿ ಇದೆ. ಅಭಿವೃದ್ಧಿ ಆಗಬೇಕು ಎಂದರೆ ಮಂಡ್ಯಕ್ಕೆ ಜನರು ಬರಬೇಕು. ಈ ಎರಡು ಯೋಜನೆಗಳಿಂದ ಕೆಆರ್ಎಸ್ಗೆ ಯಾವುದೇ ಧಕ್ಕೆ ಆಗದು. ಜನರು ಬಂದರೆ ಡ್ಯಾಂ ಕಲ್ಲಿಗೆ ಗುದಿಯುತ್ತಾರಾ? ಕಾವೇರಿ ಆರತಿಯನ್ನು ನಮ್ಮ ಸರ್ಕಾರ ಮಾಡೇ ಮಾಡುತ್ತೆ. ರೈತರ ವಿರೋಧದ ಹಿಂದೆ ಯಾವ ಷಡ್ಯಂತ್ರ ಇದೆಯೋ ಗೊತ್ತಿಲ್ಲ. 20 ರೂಪಾಯಿ ಕರ್ಪೂರ ಹಚ್ಚೋಕೆ ಯಾಕೆ 100 ಕೋಟಿ ರೂ.ಎಂಬ ರೈತ ಸಂಘದ ಮುಖಂಡರಿಗೆ ಶಾಸಕರು ಟಾಂಗ್ ನೀಡಿದರು.
ಯೋಜನೆ ಜಾರಿಯಾಗುವ ಮುನ್ನ ಅದ್ಯಾಕೆ,ಇದ್ಯಾಕೆ ಅನ್ನೊದ್ಯಾಕೆ?
ಕರ್ಪೂರ ಹಚ್ಚೋಕೆ 20 ರೂ. ಸಾಕು, ಆದರೆ ಆರತಿ ಮಾಡಲು ಇನ್ಫಸ್ಟ್ರಕ್ಚರ್ ಬೇಕಲ್ಲ. 20 ಸಾವಿರ ಜನರು ಕುಳಿತು ನೋಡಲು ಬೇಕಲ್ಲ, ಯೋಜನೆಗೆ ಡಿಪಿಆರ್ ಆಗಲಿದೆ, ನೂರು ಕೋಟಿ ರೂ.ಡ್ರಾ ಮಾಡ್ಕೊಂಡು ಬರೋಕೆ ಆಗಲ್ಲ. ವಿರೋಧ ಮಾಡುವವರು ಡಿಪಿಆರ್ ತರಿಸಿಕೊಂಡು ನೋಡಿ. ಯಾವುದಕ್ಕೆ ಎಷ್ಟೆಷ್ಟು ಖರ್ಚು ಆಗುತ್ತೆ ಎಂದು ಪರಿಶೀಲಿಸಿ. ಭ್ರಷ್ಟಾಚಾರ ಕಂಡರೆ ಕೇಸ್ ಹಾಕಿ ಜೈಲಿಗೆ ಕಳುಹಿಸಿ. ಅದು ಬಿಟ್ಟು ಮಾಡುವ ಮುನ್ನವೇ ಅದ್ಯಾಕೆ, ಇದ್ಯಾಕೆ ಅನ್ನೋದು ಸರಿಯಲ್ಲ ಎಂದರು.
100 ಕೋಟಿ ರೂ.ಕೊಡ್ತಿರೋದು 100ರಷ್ಟು ಸತ್ಯ ;
ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾವೇರಿ ಆರತಿ ಮಾಡೇ ಮಾಡ್ತೀವಿ. ಅವರ ರೀತಿ 8 ಸಾವಿರ ಕೋಟಿ ರೂ.ಅಲ್ಲ, ಮುಖ್ಯಮಂತ್ರಿ ಆಗಿದ್ದಾಗ 8 ಸಾವಿರ ಕೋಟಿ ರೂ.ಕೊಟ್ಟೆ. ಇಳಿದಮೇಲೆ ಹೊರಟೋಯ್ತೂ ಅನ್ನೋದಲ್ಲ. 100 ಕೋಟಿ ರೂ.ಕೊಡ್ತಿರೋದು 100ಕ್ಕೆ 100 ಸತ್ಯ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…