ಮಂಡ್ಯ

ಕಾವೇರಿ ಆರತಿಗೆ ವಿರೋಧ ಏಕೆ : ಶಾಸಕ ರವಿಕುಮಾರ್‌

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನಗೊಂಡರೆ ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಇದರ ಅನುಕೂಲ ರೈತರು ಹಾಗೂ ರೈತರ ಮಕ್ಕಳಿಗೆ ಆಗುತ್ತದೆ. ವಿರೋಧ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ದೊಡ್ಡ ಹಳ್ಳಿ ಮಂಡ್ಯ ಅಭಿವೃದ್ಧಿ ಆಗಬೇಕು: ಮಂಡ್ಯ ದೊಡ್ಡ ಹಳ್ಳಿ ರೀತಿ ಇದೆ. ಅಭಿವೃದ್ಧಿ ಆಗಬೇಕು ಎಂದರೆ ಮಂಡ್ಯಕ್ಕೆ ಜನರು ಬರಬೇಕು. ಈ ಎರಡು ಯೋಜನೆಗಳಿಂದ ಕೆಆರ್‌ಎಸ್‌ಗೆ ಯಾವುದೇ ಧಕ್ಕೆ ಆಗದು. ಜನರು ಬಂದರೆ ಡ್ಯಾಂ ಕಲ್ಲಿಗೆ ಗುದಿಯುತ್ತಾರಾ? ಕಾವೇರಿ ಆರತಿಯನ್ನು ನಮ್ಮ ಸರ್ಕಾರ ಮಾಡೇ ಮಾಡುತ್ತೆ. ರೈತರ ವಿರೋಧದ ಹಿಂದೆ ಯಾವ ಷಡ್ಯಂತ್ರ ಇದೆಯೋ ಗೊತ್ತಿಲ್ಲ. 20 ರೂಪಾಯಿ ಕರ್ಪೂರ ಹಚ್ಚೋಕೆ ಯಾಕೆ 100 ಕೋಟಿ ರೂ.ಎಂಬ ರೈತ ಸಂಘದ ಮುಖಂಡರಿಗೆ ಶಾಸಕರು ಟಾಂಗ್ ನೀಡಿದರು.

ಯೋಜನೆ ಜಾರಿಯಾಗುವ ಮುನ್ನ ಅದ್ಯಾಕೆ,ಇದ್ಯಾಕೆ ಅನ್ನೊದ್ಯಾಕೆ?
ಕರ್ಪೂರ ಹಚ್ಚೋಕೆ 20 ರೂ. ಸಾಕು, ಆದರೆ ಆರತಿ ಮಾಡಲು ಇನ್ಫಸ್ಟ್ರಕ್ಚರ್ ಬೇಕಲ್ಲ. 20 ಸಾವಿರ ಜನರು ಕುಳಿತು ನೋಡಲು ಬೇಕಲ್ಲ, ಯೋಜನೆಗೆ ಡಿಪಿಆರ್ ಆಗಲಿದೆ, ನೂರು ಕೋಟಿ ರೂ.ಡ್ರಾ ಮಾಡ್ಕೊಂಡು ಬರೋಕೆ ಆಗಲ್ಲ. ವಿರೋಧ ಮಾಡುವವರು ಡಿಪಿಆರ್ ತರಿಸಿಕೊಂಡು ನೋಡಿ. ಯಾವುದಕ್ಕೆ ಎಷ್ಟೆಷ್ಟು ಖರ್ಚು ಆಗುತ್ತೆ ಎಂದು ಪರಿಶೀಲಿಸಿ. ಭ್ರಷ್ಟಾಚಾರ ಕಂಡರೆ ಕೇಸ್ ಹಾಕಿ ಜೈಲಿಗೆ ಕಳುಹಿಸಿ. ಅದು ಬಿಟ್ಟು ಮಾಡುವ ಮುನ್ನವೇ ಅದ್ಯಾಕೆ, ಇದ್ಯಾಕೆ ಅನ್ನೋದು ಸರಿಯಲ್ಲ ಎಂದರು.

100 ಕೋಟಿ ರೂ.ಕೊಡ್ತಿರೋದು 100ರಷ್ಟು ಸತ್ಯ ;
ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾವೇರಿ ಆರತಿ ಮಾಡೇ ಮಾಡ್ತೀವಿ. ಅವರ ರೀತಿ 8 ಸಾವಿರ ಕೋಟಿ ರೂ.ಅಲ್ಲ, ಮುಖ್ಯಮಂತ್ರಿ ಆಗಿದ್ದಾಗ 8 ಸಾವಿರ ಕೋಟಿ ರೂ.ಕೊಟ್ಟೆ. ಇಳಿದಮೇಲೆ ಹೊರಟೋಯ್ತೂ ಅನ್ನೋದಲ್ಲ. 100 ಕೋಟಿ ರೂ.ಕೊಡ್ತಿರೋದು 100ಕ್ಕೆ 100 ಸತ್ಯ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago