ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗಾಗಿ ಲೋಕಸಭಾ ಚುನಾವಣೆಗೆ ಬರುತ್ತಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಅವರ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನು ಏಕೆ ಬಲಿ ಕೊಡಬೇಕು ಎಂದಿದ್ದಾರೆ.
ಜಿಲ್ಲೆಯ ಜನರ ದುಡುಕಿನ ನಿರ್ಧಾರ ಜಿಲ್ಲೆಯನ್ನು ನೂರು ವರ್ಷದಷ್ಟು ಹಿಂದಕ್ಕೆ ಕರೆದೊಯ್ಯುತ್ತದೆ. ರಾಜಕೀಯ ತೀರ್ಮಾನ ನಿಮ್ಮ ಕೈಯಲ್ಲಿದೆ. ನಾವು ಜಿಲ್ಲೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ನಮ್ಮೊಂದಿಗೆ ಕೈಜೋಡಿಸಿ
ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಸೋಲು ಕುಮಾರಸ್ವಾಮಿ ಅವರಿಗೆ ಹೊಸದಲ್ಲ. ಅವರ ಸೋಲಿನಿಂದ ಏನು ಹಾಗಲ್ಲ. ಜನರು ಕರೆದಾಗ ಬರುವುದು ಸ್ಟಾರ್ ಚಂದ್ರು ಅವರೇ ಹೊರತು ಕುಮಾರಸ್ವಾಮಿ ಅಲ್ಲ, ಕುಮಾರಸ್ವಾಮಿ ಅವರನ್ನು ನೀವು ನಿಮ್ಮ ಊರಿನ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕರೆಯುವುದಕ್ಕೇ ಆಗುತ್ತಾ? ಯೋಚನೆ ಮಾಡಿ, ನಮಗೆ ಜಿಲ್ಲೆ ಹಾಗೂ ಜಿಲ್ಲೆ ಅಭಿವೃದ್ಧಿ ಮಾತ್ರ ಮುಖ್ಯವಾಗಿದೆ ಎಂದರು
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…