ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗಾಗಿ ಲೋಕಸಭಾ ಚುನಾವಣೆಗೆ ಬರುತ್ತಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಅವರ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನು ಏಕೆ ಬಲಿ ಕೊಡಬೇಕು ಎಂದಿದ್ದಾರೆ.
ಜಿಲ್ಲೆಯ ಜನರ ದುಡುಕಿನ ನಿರ್ಧಾರ ಜಿಲ್ಲೆಯನ್ನು ನೂರು ವರ್ಷದಷ್ಟು ಹಿಂದಕ್ಕೆ ಕರೆದೊಯ್ಯುತ್ತದೆ. ರಾಜಕೀಯ ತೀರ್ಮಾನ ನಿಮ್ಮ ಕೈಯಲ್ಲಿದೆ. ನಾವು ಜಿಲ್ಲೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ನಮ್ಮೊಂದಿಗೆ ಕೈಜೋಡಿಸಿ
ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಸೋಲು ಕುಮಾರಸ್ವಾಮಿ ಅವರಿಗೆ ಹೊಸದಲ್ಲ. ಅವರ ಸೋಲಿನಿಂದ ಏನು ಹಾಗಲ್ಲ. ಜನರು ಕರೆದಾಗ ಬರುವುದು ಸ್ಟಾರ್ ಚಂದ್ರು ಅವರೇ ಹೊರತು ಕುಮಾರಸ್ವಾಮಿ ಅಲ್ಲ, ಕುಮಾರಸ್ವಾಮಿ ಅವರನ್ನು ನೀವು ನಿಮ್ಮ ಊರಿನ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕರೆಯುವುದಕ್ಕೇ ಆಗುತ್ತಾ? ಯೋಚನೆ ಮಾಡಿ, ನಮಗೆ ಜಿಲ್ಲೆ ಹಾಗೂ ಜಿಲ್ಲೆ ಅಭಿವೃದ್ಧಿ ಮಾತ್ರ ಮುಖ್ಯವಾಗಿದೆ ಎಂದರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…