ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗಾಗಿ ಲೋಕಸಭಾ ಚುನಾವಣೆಗೆ ಬರುತ್ತಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಅವರ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನು ಏಕೆ ಬಲಿ ಕೊಡಬೇಕು ಎಂದಿದ್ದಾರೆ.
ಜಿಲ್ಲೆಯ ಜನರ ದುಡುಕಿನ ನಿರ್ಧಾರ ಜಿಲ್ಲೆಯನ್ನು ನೂರು ವರ್ಷದಷ್ಟು ಹಿಂದಕ್ಕೆ ಕರೆದೊಯ್ಯುತ್ತದೆ. ರಾಜಕೀಯ ತೀರ್ಮಾನ ನಿಮ್ಮ ಕೈಯಲ್ಲಿದೆ. ನಾವು ಜಿಲ್ಲೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ನಮ್ಮೊಂದಿಗೆ ಕೈಜೋಡಿಸಿ
ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಸೋಲು ಕುಮಾರಸ್ವಾಮಿ ಅವರಿಗೆ ಹೊಸದಲ್ಲ. ಅವರ ಸೋಲಿನಿಂದ ಏನು ಹಾಗಲ್ಲ. ಜನರು ಕರೆದಾಗ ಬರುವುದು ಸ್ಟಾರ್ ಚಂದ್ರು ಅವರೇ ಹೊರತು ಕುಮಾರಸ್ವಾಮಿ ಅಲ್ಲ, ಕುಮಾರಸ್ವಾಮಿ ಅವರನ್ನು ನೀವು ನಿಮ್ಮ ಊರಿನ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕರೆಯುವುದಕ್ಕೇ ಆಗುತ್ತಾ? ಯೋಚನೆ ಮಾಡಿ, ನಮಗೆ ಜಿಲ್ಲೆ ಹಾಗೂ ಜಿಲ್ಲೆ ಅಭಿವೃದ್ಧಿ ಮಾತ್ರ ಮುಖ್ಯವಾಗಿದೆ ಎಂದರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…