ಮಂಡ್ಯ

ಜೆಡಿಎಸ್‌ ಅಸ್ತಿತ್ವಕ್ಕೆ ಜಿಲ್ಲೆಯನ್ನೇಕೆ ಬಲಿ ಕೊಡಬೇಕು: ಹೆಚ್‌ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ

ಮಳವಳ್ಳಿ: ಜೆಡಿಎಸ್‌ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್‌ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗಾಗಿ ಲೋಕಸಭಾ ಚುನಾವಣೆಗೆ ಬರುತ್ತಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಅವರ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನು ಏಕೆ ಬಲಿ ಕೊಡಬೇಕು ಎಂದಿದ್ದಾರೆ.

ಜಿಲ್ಲೆಯ ಜನರ ದುಡುಕಿನ ನಿರ್ಧಾರ ಜಿಲ್ಲೆಯನ್ನು ನೂರು ವರ್ಷದಷ್ಟು ಹಿಂದಕ್ಕೆ ಕರೆದೊಯ್ಯುತ್ತದೆ. ರಾಜಕೀಯ ತೀರ್ಮಾನ ನಿಮ್ಮ ಕೈಯಲ್ಲಿದೆ. ನಾವು ಜಿಲ್ಲೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ನಮ್ಮೊಂದಿಗೆ ಕೈಜೋಡಿಸಿ
ಎಂದು ಮನವಿ ಮಾಡಿದರು.

ಲೋಕಸಭಾ ಚುನಾವಣೆ ಸೋಲು ಕುಮಾರಸ್ವಾಮಿ ಅವರಿಗೆ ಹೊಸದಲ್ಲ. ಅವರ ಸೋಲಿನಿಂದ ಏನು ಹಾಗಲ್ಲ. ಜನರು ಕರೆದಾಗ ಬರುವುದು ಸ್ಟಾರ್‌ ಚಂದ್ರು ಅವರೇ ಹೊರತು ಕುಮಾರಸ್ವಾಮಿ ಅಲ್ಲ, ಕುಮಾರಸ್ವಾಮಿ ಅವರನ್ನು ನೀವು ನಿಮ್ಮ ಊರಿನ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕರೆಯುವುದಕ್ಕೇ ಆಗುತ್ತಾ? ಯೋಚನೆ ಮಾಡಿ, ನಮಗೆ ಜಿಲ್ಲೆ ಹಾಗೂ ಜಿಲ್ಲೆ ಅಭಿವೃದ್ಧಿ ಮಾತ್ರ ಮುಖ್ಯವಾಗಿದೆ ಎಂದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago