ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗಾಗಿ ಲೋಕಸಭಾ ಚುನಾವಣೆಗೆ ಬರುತ್ತಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಅವರ ಪಕ್ಷದ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನು ಏಕೆ ಬಲಿ ಕೊಡಬೇಕು ಎಂದಿದ್ದಾರೆ.
ಜಿಲ್ಲೆಯ ಜನರ ದುಡುಕಿನ ನಿರ್ಧಾರ ಜಿಲ್ಲೆಯನ್ನು ನೂರು ವರ್ಷದಷ್ಟು ಹಿಂದಕ್ಕೆ ಕರೆದೊಯ್ಯುತ್ತದೆ. ರಾಜಕೀಯ ತೀರ್ಮಾನ ನಿಮ್ಮ ಕೈಯಲ್ಲಿದೆ. ನಾವು ಜಿಲ್ಲೆಯ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ನಮ್ಮೊಂದಿಗೆ ಕೈಜೋಡಿಸಿ
ಎಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆ ಸೋಲು ಕುಮಾರಸ್ವಾಮಿ ಅವರಿಗೆ ಹೊಸದಲ್ಲ. ಅವರ ಸೋಲಿನಿಂದ ಏನು ಹಾಗಲ್ಲ. ಜನರು ಕರೆದಾಗ ಬರುವುದು ಸ್ಟಾರ್ ಚಂದ್ರು ಅವರೇ ಹೊರತು ಕುಮಾರಸ್ವಾಮಿ ಅಲ್ಲ, ಕುಮಾರಸ್ವಾಮಿ ಅವರನ್ನು ನೀವು ನಿಮ್ಮ ಊರಿನ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಕರೆಯುವುದಕ್ಕೇ ಆಗುತ್ತಾ? ಯೋಚನೆ ಮಾಡಿ, ನಮಗೆ ಜಿಲ್ಲೆ ಹಾಗೂ ಜಿಲ್ಲೆ ಅಭಿವೃದ್ಧಿ ಮಾತ್ರ ಮುಖ್ಯವಾಗಿದೆ ಎಂದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…