ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಹೃದಯ ವಿದ್ರಾವಿಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ ಪತ್ನಿ ವಸಂತಮ್ಮ(65) ಮತ್ತು ಕಾಳೇಗೌಡ(70) ಮೃತ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ.
ಘಟನೆ ವಿವರ
ಬುಧವಾರ ಸಂಜೆ ಸುಮಾರು 6ಗಂಟೆಯ ಸಮಯದಲ್ಲಿ ತಮ್ಮ ಜಮೀನಿನಲ್ಲಿ ಇರುವ ತೆರೆದ ಬಾವಿಯಲ್ಲಿ ಎಮ್ಮೆಗೆ ಮೈ ತೊಳೆಯಲೆಂದು ವಸಂತಮ್ಮ ಹೋಗಿದ್ದ ಸಂದರ್ಭದಲ್ಲಿ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಣ್ಣಾರೆ ನೋಡಿದ ಆಕೆಯ ಗಂಡ ಕಾಳೇಗೌಡ ಸಹ ನೀರಿಗೆ ದುಮುಕಿ ಹೆಂಡತಿ ಮತ್ತು ಎಮ್ಮೆಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾಗ ಎಮ್ಮೆ ಈಜಿ ದಡ ಸೇರಿದರೆ ಗಂಡ ಕಾಳೇಗೌಡ ಮತ್ತು ಹೆಂಡತಿ ವಸಂತಮ್ಮ ಇಬ್ಬರೂ ಸಹ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಇಡೀ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಮೃತರ ಅಂತ್ಯಕ್ರಿಯೆಯು ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಅರೆಬೊಪ್ಪನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರ ಹಾಗೂ ಬಂಧುಗಳ ಆಕ್ರಂಧನದ ನಡುವೆ ನಡೆಯಿತು. ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…