ಮಂಡ್ಯ

ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ ಪತ್ನಿ ; ರಕ್ಷಣೆಗೆ ಬಂದ ಪತಿಯೂ ನೀರುಪಾಲು

ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ‌ ಮೃತ ಪಟ್ಟಿರುವ ಹೃದಯ ವಿದ್ರಾವಿಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ ಪತ್ನಿ ವಸಂತಮ್ಮ(65) ಮತ್ತು  ಕಾಳೇಗೌಡ(70) ಮೃತ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ.

ಘಟನೆ ವಿವರ

ಬುಧವಾರ ಸಂಜೆ ಸುಮಾರು 6ಗಂಟೆಯ ಸಮಯದಲ್ಲಿ ತಮ್ಮ ಜಮೀನಿನಲ್ಲಿ ಇರುವ ತೆರೆದ ಬಾವಿಯಲ್ಲಿ ಎಮ್ಮೆಗೆ ಮೈ ತೊಳೆಯಲೆಂದು ವಸಂತಮ್ಮ ಹೋಗಿದ್ದ ಸಂದರ್ಭದಲ್ಲಿ ಅಕಸ್ಮಿಕವಾಗಿ ನೀರಿನಲ್ಲಿ‌ ಮುಳುಗುತ್ತಿದ್ದರು. ಇದನ್ನು ಕಣ್ಣಾರೆ ನೋಡಿದ ಆಕೆಯ ಗಂಡ ಕಾಳೇಗೌಡ ಸಹ ನೀರಿಗೆ ದುಮುಕಿ ಹೆಂಡತಿ ಮತ್ತು ಎಮ್ಮೆಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾಗ ಎಮ್ಮೆ ಈಜಿ ದಡ ಸೇರಿದರೆ ಗಂಡ ಕಾಳೇಗೌಡ ಮತ್ತು ಹೆಂಡತಿ ವಸಂತಮ್ಮ ಇಬ್ಬರೂ ಸಹ ನೀರಿನಲ್ಲಿ‌ ಮುಳುಗಿ‌ ಮೃತ ಪಟ್ಟಿದ್ದಾರೆ.

ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಇಡೀ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಮೃತರ ಅಂತ್ಯಕ್ರಿಯೆಯು ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಅರೆಬೊಪ್ಪನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರ ಹಾಗೂ ಬಂಧುಗಳ ಆಕ್ರಂಧನದ ನಡುವೆ ನಡೆಯಿತು. ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago