ಮಂಡ್ಯ

ಮೇಲುಕೋಟೆ ದಾಸೋಹ ಭವನ ನಿರ್ವಹಣೆಗೆ ಅಗತ್ಯ ನೆರವು : ಮಾಜಿ ಸಚಿವ ಪುಟ್ಟರಾಜು ವಾಗ್ದಾನ

ಮೇಲುಕೋಟೆ : ಚಲುವನಾರಾಯಣಸ್ವಾಮಿ ದಾಸೋಹ ಭವನದ ನಿರ್ವಹಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾನ ಮಾಡಿದರು.

ಮೇಲುಕೋಟೆಯ ದಾಸೋಹ ಭವನಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಲ್ಲೇ ತಯಾರಿಸಿದ ಪ್ರಸಾದವನ್ನು ಸ್ವೀಕರಿಸಿ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.

ಸ್ವಚ್ಛತೆ ಹಾಗೂ ಅನ್ನದಾನ ನಿರ್ವಹಣೆ, ಪ್ರಸಾದದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ನೀಡಿದ ವಿಶೇಷ ಅನುದಾನದಲ್ಲಿ ನನ್ನ ಅವಧಿಯಲ್ಲೇ ನಿರ್ಮಾಣಗೊಂಡು ಮುಖ್ಯಮಂತ್ರಿಗಳಿಂದ ವೈರಮುಡಿ ಉತ್ಸವದಂದೇ ಉದ್ಘಾಟಿಸಲಾಗಿತ್ತು. ಕಾರಣಾಂತರದಿಂದ ನಿತ್ಯಅನ್ನದಾನ ಆರಂಭಿಸಲಾಗಿರಲಿಲ್ಲ. ಇದೀಗ ಅನ್ನದಾನ ಭವನ ವಾರಕ್ಕೆರಡು ದಿನ ಸಾರ್ವಜನಿಕರ ಉಪಯೋಗಕ್ಕೆ ದೊರೆಯುತ್ತಿರುವುದು ಸ್ವಾಗತಾರ್ಹ ಎಂದರು. ಮೇಲುಕೋಟೆಯಲ್ಲಿ ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸುವ ಮತ್ತು ಅನ್ನದಾನಭವನ ನಿರ್ವಹಣೆಯಲ್ಲಿ ಯಾರೂ ರಾಜಕೀಯ ಮಾಡಬಾರದು. ನಾನೂ ಕೂಡ ನಿರ್ವಹಣೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಇದೇ ವೇಳೆ ಮುಳುಬಾಗಿಲ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ನಾವು ಎಷ್ಟೇ ಶ್ರೀಮಂತರಾದರೂ ದೇವಸ್ಥಾನದ ಪ್ರಸಾದ ಮತ್ತು ದರ್ಶನ ಅತ್ಯಂತ ಪವಿತ್ರವಾದುದು. ಆದ್ದರಿಂದ ಕ್ಷೇತ್ರದ ಅಭಿವೃದ್ಧಿ ಮತ್ತು ದಾಸೋಹ ಭವನದ ನಿರ್ವಹಣೆಗೆ ಕೈಲಾದ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದರು.

ಯುವ ಮುಖಂಡರಾದ ಈಶಮುರಳಿ, ಪುಳಿಯೋಗರೆ ರವಿ, ದೇವಾಲಯದ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

3 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

16 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

17 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

18 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

18 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

19 hours ago