ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು.
ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.15ರಂದು ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಳೆಗೆ ಇಳಿದಿತ್ತು. ಅಲ್ಲಿ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಅಲ್ಲಿ ಮರಳಿ ಬರಲು ಸಾಧ್ಯವಾಗಿರಲಿಲ್ಲ.
ಈ ವೇಳೆ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಸಂಜೆವರೆಗೂ ಕಾದರೂ ಆನೆ ಮೇಲಕ್ಕೆ ಬರಲಿಲ್ಲ.
ಸ್ಥಳಕ್ಕೆ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗದ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಪ್ರಾರಂಭದಲ್ಲಿ ಅಧಿಕಾರಿಗಳು ಆನೆಗೆ ಅಹಾರ ನೀಡಿ, ಗನ್ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಕ್ರೇನ್ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಯಿತು.
ಆನೆ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆಯ ಸೊಂಡಿಲಿನ ತುದಿ ಬಿಳಿ ಬಣ್ಣಕ್ಕೆ ತಿರುಗಿದ್ದು ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆಯಿದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…