ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು.
ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.15ರಂದು ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಳೆಗೆ ಇಳಿದಿತ್ತು. ಅಲ್ಲಿ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಅಲ್ಲಿ ಮರಳಿ ಬರಲು ಸಾಧ್ಯವಾಗಿರಲಿಲ್ಲ.
ಈ ವೇಳೆ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಸಂಜೆವರೆಗೂ ಕಾದರೂ ಆನೆ ಮೇಲಕ್ಕೆ ಬರಲಿಲ್ಲ.
ಸ್ಥಳಕ್ಕೆ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗದ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಪ್ರಾರಂಭದಲ್ಲಿ ಅಧಿಕಾರಿಗಳು ಆನೆಗೆ ಅಹಾರ ನೀಡಿ, ಗನ್ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಕ್ರೇನ್ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಯಿತು.
ಆನೆ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆಯ ಸೊಂಡಿಲಿನ ತುದಿ ಬಿಳಿ ಬಣ್ಣಕ್ಕೆ ತಿರುಗಿದ್ದು ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆಯಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…